ಬ್ರೇಕಿಂಗ್ ನ್ಯೂಸ್
13-04-21 09:27 pm Headline Karnataka News Network ಕರಾವಳಿ
ಮಂಗಳೂರು, ಎ.13: ಅರಬ್ಬೀ ಸಮುದ್ರದಲ್ಲಿ ಸಿಂಗಾಪುರ ಮೂಲದ ಕಂಟೇನರ್ ಹಡಗಿಗೆ ಡಿಕ್ಕಿಯಾಗಿ ದುರಂತಕ್ಕೀಡಾದ ಮೀನುಗಾರಿಕೆ ಬೋಟಿನಲ್ಲಿದ್ದ ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದ್ದು ಉಳಿದ ಸಿಬಂದಿಯ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಸಿಂಗಾಪುರ ಮೂಲದ ಕಂಟೇನರ್ ಹಡಗು ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಸಂಚರಿಸುತ್ತಿದ್ದಾಗ ಮೀನುಗಾರಿಕಾ ಬೋಟಿಗೆ ಡಿಕ್ಕಿಯಾಗಿದೆ ಎನ್ನಲಾಗುತ್ತಿದೆ. ನಿನ್ನೆ ತಡರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಕೋಸ್ಟ್ ಗಾರ್ಡ್ ಮತ್ತು ಕಂಟೇನರ್ ಹಡಗಿನ ಸಿಬಂದಿ ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಮೂವರ ಮೃತದೇಹ ಪತ್ತೆಯಾಗಿದ್ದು ಅವರನ್ನು ಪಶ್ಚಿಮ ಬಂಗಾಳ ಮೂಲದ ಅಲೆಕ್ಸಾಂಡರ್ ಸೈರಂಗ್, ಅವರ ಮಾವ ಎನ್ನಲಾಗಿರುವ ಇನ್ನೊಬ್ಬ ವ್ಯಕ್ತಿ (ಹೆಸರು ಗೊತ್ತಾಗಿಲ್ಲ), ಮತ್ತೊಬ್ಬ ಮಾಣಿಕ್ ದಾಸ್ ಎಂಬವರೆಂದು ಕೋಸ್ಟ್ ಗಾರ್ಡ್ ಮಾಹಿತಿ ನೀಡಿದೆ. ಈ ನಡುವೆ ಇಬ್ಬರನ್ನು ರಕ್ಷಿಸಿದ್ದು ಪಶ್ಚಿಮ ಬಂಗಾಳದ ಸುನಿಲ್ ದಾಸ್ (34), ತಮಿಳುನಾಡಿನ ರಾಮೇಶ್ವರದ ವೇಲ್ ಮುರುಗನ್ (37) ಎಂದು ಗುರುತಿಸಲಾಗಿದೆ.
ಬೋಟಿನಲ್ಲಿ ಒಟ್ಟು 14 ಮಂದಿ ಇದ್ದರೆನ್ನಲಾಗಿದ್ದು ಈ ಪೈಕಿ ಒಂಬತ್ತು ಮಂದಿಯ ಸುಳಿವು ಪತ್ತೆಯಾಗಿಲ್ಲ. ಕೋಸ್ಟ್ ಗಾರ್ಡ್ ನಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಿಂಗಾಪುರ್ ಎಂವಿ ಆ್ಯಪಲ್ ಎಂಬ ಹೆಸರಿನ ಕಂಟೇನರ್ ಹಡಗು ಡಿಕ್ಕಿಯಾಗಿತ್ತು. ರಭಾ ಎಂಬ ಹೆಸರಿನ ಬೋಟ್ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಬೇಪೂರ್ ಮೂಲದ್ದಾಗಿದ್ದು ಎರಡು ದಿನಗಳ ಹಿಂದೆ ಬೇಪೂರ್ ನಿಂದ ಮೀನುಗಾರಿಕೆಗೆ ಹೊರಟಿತ್ತು. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು.
In a tragic incident, three fishermen were killed after the boat start to sink by collision with Singapore ship in Mangalore. Several are said to be missing among 14 members two have been reduced and three found dead.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm