ಬ್ರೇಕಿಂಗ್ ನ್ಯೂಸ್
15-04-21 04:57 pm Mangalore Correspondent ಕರಾವಳಿ
ಮಂಗಳೂರು, ಎ.15: ನಗರದ ಬಳ್ಳಾಲ್ ಬಾಗ್ ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ಮಳಿಗೆ ಬೆಂಕಿಗೆ ಆಹುತಿಯಾಗಿದೆ. ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದ್ದು, ಕ್ಷಣಮಾತ್ರದಲ್ಲಿ ಬೆಂಕಿ ಹರಡಿಕೊಂಡು ಮೇಲ್ಭಾಗದ ಫೋಮ್ ಸೀಲಿಂಗನ್ನು ಸುಟ್ಟು ಹಾಕಿದೆ.
ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಹೊಸ ರೀತಿಯ ಮಳಿಗೆ ಆಗಿತ್ತು. ಸಿಟಿ ಸೆಂಟರ್, ಬಿಗ್ ಬಝಾರ್ ನಲ್ಲಿರುವ ರೀತಿ ಎಲ್ಲವನ್ನೂ ಒಳಗೊಂಡ ಸೂಪರ್ ಮಾರ್ಕೆಟ್. ಆದರೆ, ಯಾವುದೇ ಬಿಲ್ಡಿಂಗ್ ಕಟ್ಟದೆ ನೆಲದಲ್ಲೇ ಅಷ್ಟು ದೊಡ್ಡ ಮಾದರಿಯಲ್ಲಿ ಹೈಪರ್ ಮಾರ್ಕೆಟ್ ಸ್ಥಾಪಿಸಿದ್ದು ಮಂಗಳೂರಿನಲ್ಲಿ ಅದೇ ಮೊದಲು. ಜೀನಸು, ತರಕಾರಿಯಿಂದ ತೊಡಗಿ ಮನೆ, ಕಚೇರಿಗೆ ಬೇಕಾಗುವ ಎಲ್ಲ ಸಾಮಗ್ರಿಗಳು ಅಲ್ಲಿ ದೊರೆಯುತ್ತಿದ್ದವು. ಹೀಗಾಗಿ ಕಡಿಮೆ ಅವಧಿಯಲ್ಲಿ ನಗರದ ಜನರ ಪಾಲಿಗೆ ಮೆಚ್ಚಿನ ಸೂಪರ್ ಮಾರ್ಕೆಟ್ ಆಗಿತ್ತು.
ಈಗ ಹತ್ತು ಗಂಟೆಗೆ ರಾತ್ರಿ ಕರ್ಫ್ಯೂ ವಿಧಿಸುವುದರಿಂದ ನಿನ್ನೆ ರಾತ್ರಿ 9.30ಕ್ಕೆ ಮಳಿಗೆ ಕ್ಲೋಸ್ ಮಾಡಿ ತೆರಳಿದ್ದೆವು. ಹತ್ತುವರೆ ಹೊತ್ತಿಗೆ ಹತ್ತಿರದ ಅಪಾರ್ಟ್ಮೆಂಟ್ ನಿವಾಸಿಗಳು ಮಳಿಗೆಯಲ್ಲಿ ಬೆಂಕಿ ಹತ್ತಿಕೊಂಡಿರುವುದನ್ನು ಕರೆ ಮಾಡಿ ತಿಳಿಸಿದ್ದಾರೆ. ನಾವು ಬಂದ ಬಳಿಕವೂ ಅಗ್ನಿಶಾಮಕ ಸಿಬಂದಿ ಬರುವಾಗ ಲೇಟ್ ಆಗಿತ್ತು. ಅಷ್ಟರಲ್ಲಿ ಬೆಂಕಿ ಹರಡಿದ್ದು ಒಳಭಾಗದ ಸೀಲಿಂಗ್ ಪೂರ್ತಿ ಸುಟ್ಟು ಹೋಗಿದ್ದು ಪ್ಲಾಸ್ಟಿಕ್ ಉರಿದು ಕೆಳಗೆ ಬಿದ್ದು ಕೆಳಭಾಗದಲ್ಲಿದ್ದ ಸಾಮಗ್ರಿಗಳು ಕೂಡ ಹಾಳಾಗಿವೆ ಎಂದು ಹೇಳಿದರು ಅಲ್ಲಿನ ಸಿಬಂದಿ.
ಒಂದು ಕೋಟಿ ನಷ್ಟ ಆಗಿರಬಹುದೆಂದು ಕೆಲವರು ಅಂದಾಜಿಸಿದ್ದಾರೆ. ಇನ್ಶೂರೆನ್ಸ್ ಕಂಪನಿಯವರು ಬಂದಿಲ್ಲ. ಇನ್ಶೂರೆನ್ಸ್ ಇದೆ. ಎಸಿಯಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ. ಆದರೆ, ನಾವು ರಾತ್ರಿ ವೇಳೆ ಎಸಿ ಸೇರಿದಂತೆ ಎಲ್ಲವನ್ನೂ ಆಫ್ ಮಾಡಿ ಹೋಗಿದ್ದೆವು. ಪ್ರಕರಣ ದಾಖಲಾಗಿದೆ, ನಷ್ಟ ಅಂದಾಜು ಮಾಡುತ್ತಿದ್ದಾರೆ ಎಂದರು ಇನ್ನೊಬ್ಬ ಸಿಬಂದಿ.
A short circuit has triggered fire Fieldstar HyperMartet at Ballalbagh in Mangalore here on Thursday April 15, leading to panic. It is estimated of one crore loss to the company.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm