ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm