ಬ್ರೇಕಿಂಗ್ ನ್ಯೂಸ್
16-04-21 11:17 pm Mangaluru correspondent ಕರಾವಳಿ
ಮಂಗಳೂರು, ಎ.16 : ಅರಬ್ಬೀ ಸಮುದ್ರದಲ್ಲಿ ದುರಂತಕ್ಕೀಡಾದ ಬೋಟಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ಮೀನುಗಾರರ ಪೈಕಿ ಮೂವರ ಮೃತದೇಹ ಶುಕ್ರವಾರ ಸಂಜೆ ಪತ್ತೆಯಾಗಿದೆ. ಉಳಿದ ಆರು ಮಂದಿಯ ಪತ್ತೆಗಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಪಡೆ ಶೋಧ ಕಾರ್ಯಾಚರಣೆ ಮುಂದುವರಿಸಿದೆ.
ಕೋಸ್ಟ್ ಗಾರ್ಡ್ ಪಡೆಯು ‘ಐಎನ್ಎಸ್ ನಿರ್ದೇಶಕ್’ ಹಡಗಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಸಮುದ್ರದಲ್ಲಿ ಮೂರು ಮೃತದೇಹಗಳು ಪತ್ತೆಯಾಗಿವೆ. ಶವಗಳನ್ನು ಎನ್ಎಂಪಿಟಿ ಬಂದರಿಗೆ ತರಲಾಗಿದ್ದು ಕರಾವಳಿ ಕಾವಲು ಪೊಲೀಸ್ ಪಡೆಗೆ ಹಸ್ತಾಂತರಿಸಲಾಗಿದೆ. ನಾಲ್ಕು ದಿನಗಳಿಂದ ಮೃತದೇಹಗಳು ನೀರಿನಲ್ಲಿದ್ದ ಕಾರಣ ಊದಿಕೊಂಡಿದ್ದಲ್ಲದೆ, ಗುರುತು ಸಿಗದಷ್ಟು ವಿಕಾರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟ ಮೂವರ ಮೃತದೇಹ ಎರಡು ದಿನಗಳ ಹಿಂದೆಯೇ ಪತ್ತೆಯಾಗಿದ್ದು ಅವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ಕಳಿಸಿ ಕೊಡಲಾಗಿತ್ತು. ರಕ್ಷಿಸಲ್ಪಟ್ಟ ಇತರ ಇಬ್ಬರನ್ನು ಕೂಡ ಅವರದೇ ಊರಿಗೆ ಕಳುಹಿಸಲಾಗಿತ್ತು.
ಇದೀಗ ನಾಲ್ಕು ದಿನಗಳ ಬಳಿಕ ಮೂರು ಮಂದಿಯ ಶವ ಸಿಕ್ಕಿದ್ದರೆ, ಇನ್ನು ಆರು ಮಂದಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಲಾಗಿದೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ತಲಾ ಏಳು ಮಂದಿ ಬೋಟಿನಲ್ಲಿದ್ದರು ಎನ್ನೋ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಮೀನು ಕಾರ್ಮಿಕರ ಕುಟುಂಬದ ಸದಸ್ಯರು ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
The Coast guard team has found three dead bodies of the Missing fishermen and search for the rest six is on. A fishing boat capsized off Mangaluru coast afterr collision with a huge ship.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm