ಬ್ರೇಕಿಂಗ್ ನ್ಯೂಸ್
18-04-21 04:29 pm Mangaluru correspondent ಕರಾವಳಿ
ಮಂಗಳೂರು, ಏಪ್ರಿಲ್ 18: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು ಕರಾವಳಿಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಷೇಧ ಮಾಡಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.
ಸರ್ಕಾರದ ನಿಯಮಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿ ಬಿಜೆಪಿ ಶಾಸಕ ರಘಪತಿ ಭಟ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿಯ ಜನಜೀವನ ರಾಜ್ಯದ ಬೇರೆ ಜಿಲ್ಲೆಗಳ ಜನರಿಗಿಂತ ಭಿನ್ನವಾಗಿದೆ. ಈಗಾಗಲೇ ಧಾರ್ಮಿಕ ಹಿನ್ನೆಲೆಯ ಚೌಕಟ್ಟನ್ನು ಒಳಗೊಂಡ ಯಕ್ಷಗಾನ ಹರಕೆ ಬಯಲಾಟಗಳು, ನೇಮ, ದೇವತಾ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಉತ್ಸವಾದಿ ಸೇವೆಗಳಿಗೆ ದಿನಾಂಕ ಮತ್ತು ಸಮಯ ನಿಗದಿಗೊಳಿಸಲಾಗಿದೆ. ಹಾಗಾಗಿ ಈಗ ಹೇರಿರುವ ಧಾರ್ಮಿಕ ಕ್ಷೇತ್ರಗಳ ಮೇಲಿನ ನಿಷೇಧದಿಂದ ಜನರ ಧಾರ್ಮಿಕ ನಂಬಿಕೆಗಳಿಗೆ ತೊಡಕು ಉಂಟಾಗುತ್ತದೆ. ನೂತನ ನಿಯಮದಿಂದ ಸಾಂಕೇತಿಕವಾಗಿ ಕಾರ್ಯಕ್ರಮ ನಡೆಸಲೂ ತೊಂದರೆಯಾಗುವುದರಿಂದ ಸರ್ಕಾರ ನಿಯಮ ಸಡಿಲಿಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಸರ್ಕಾರ ನಿಯಮದ ಬಗ್ಗೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಉಡುಪಿ ಶಾಸಕ ರಘಪತಿ ಭಟ್, ಕರಾವಳಿ ಜಿಲ್ಲೆಗಳಲ್ಲಿ ಈ ವೇಳೆ ಅತೀ ಹೆಚ್ಚು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತದೆ. ರಾಜಕೀಯ ಕಾರ್ಯಕ್ರಮಗಳಿಗೆ 200 ಜನರ ಅವಕಾಶ ಮಾಡಿದ್ದಾರೆ. ಕರಾವಳಿಯಲ್ಲಿ ರಾಜಕೀಯ ಕಾರ್ಯಕ್ರಮಗಳ ಅವಶ್ಯಕತೆ ಇಲ್ಲ. ಧಾರ್ಮಿಕ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸೋದು ಜನಪ್ರಿಯ ಸರ್ಕಾರದ ಲಕ್ಷಣವಲ್ಲ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಶಾಸಕ ರಘಪತಿ ಭಟ್ ಆಕ್ರೋಶ ವ್ಯಕ್ತಪಡಿದ್ದಾರೆ.
ಕರಾವಳಿ ಜಿಲ್ಲೆಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸಬೇಡಿ, ಜನರ ಭಾವನೆಗಳಿಗೆ ಅಡ್ಡಿ ಮಾಡದೆ ಸರ್ಕಾರದ ಆದೇಶವನ್ನು ಹಿಂಪಡೆಯಬೇಕೆಂದು ಶಾಸಕ ರಘಪತಿ ಭಟ್ ಆಗ್ರಹಿಸಿದ್ದಾರೆ.
Dakshina Kannada religious activities hight effected by state govts tough covid rules states kota poojary and Udupi mla raghupathi bhat.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm