ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm