ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm