ಬ್ರೇಕಿಂಗ್ ನ್ಯೂಸ್
20-04-21 10:53 am Mangalore Correspondent ಕರಾವಳಿ
ಕಡಬ, ಎ.20 : ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದು ಈಜಾಟಕ್ಕೆ ಹೋದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.
ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ ಉಮ್ಮರ್ ಎಂಬವರ ಪುತ್ರ ಝಾಕಿರ್(18) ಹಾಗೂ ಉಮ್ಮರ್ ಅವರ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ಸಿನಾನ್(19) ಎಂದು ಗುರುತಿಸಲಾಗಿದೆ.
ನೆಲ್ಯಾಡಿಯಲ್ಲಿ ತನ್ನ ಮಾವನ ಕೋಳಿ ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿನಾನ್ ಹಾಗೂ ಕಾಲೇಜು ವ್ಯಾಸಂಗ ಮಾಡುತ್ತಿದ್ದ ಝಾಕಿರ್ ಜೊತೆಗೂಡಿ ಸೋಮವಾರ ಸಂಜೆ ಸ್ನಾನಕ್ಕೆಂದು ಇಚಿಲಂಪಾಡಿಯ ಗುಂಡ್ಯ ಹೊಳೆಗೆ ತೆರಳಿದ್ದರು. ಇಚಿಲಂಪಾಡಿ ಸೇತುವೆಯ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ನದಿ ತಟದಲ್ಲಿ ಮೊಬೈಲ್ ರಿಂಗಣಿಸುವುದನ್ನು ಕೇಳಿದ ಸ್ಥಳೀಯರು ಸ್ಥಳಕ್ಕಾಗಮಿಸಿದಾಗ ಬೈಕ್ ಹಾಗೂ ಕಳಚಿಟ್ಟ ವಸ್ತ್ರ ಕಂಡುಬಂದಿದ್ದು, ಈ ವೇಳೆ ಜೋಬಿನ್, ಮೋಹನ್, ನವಾಝ್, ರೋಯಿ ಹಾಗೂ ರಿಜು ಎಂಬವರು ನೀರಿಗಿಳಿದು ಹುಡುಕಾಟ ನಡೆಸಿದ್ದಾರೆ.
ಈ ವೇಳೆ ಇಬ್ಬರ ಮೃತದೇಹ ದೊರೆತಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kadaba Two youths drowned in the river after going to bath. Both were residents of Nelyadi. The deceased are identified as Zakir and Sinan.
28-05-25 07:06 pm
Bangalore Correspondent
ST Somasekhar: ಬಿಜೆಪಿಯ 10 ರಿಂದ 12 ಸ್ಥಾನ ಖಾಲಿ...
27-05-25 11:17 pm
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
28-05-25 11:16 pm
Mangalore Correspondent
Mangalore Bantwal Murder, SDPI, Congress resi...
28-05-25 10:41 pm
Bantwal Abdul Raheem Murder Case, ADGP Hitend...
28-05-25 08:04 pm
Bantwal Rahiman Murder, Puttur, Ashraf Kalega...
28-05-25 07:44 pm
Krishaveni Mines and Geology, Arrest, Mangalo...
28-05-25 05:27 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm