ಬ್ರೇಕಿಂಗ್ ನ್ಯೂಸ್
21-04-21 11:28 am Udupi Correspondent ಕರಾವಳಿ
ಉಡುಪಿ, ಎ. 21 : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ(52) ಕೊಲೆ ಪ್ರಕರಣದಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸಲಿದೆ.
2021ರ ಮಾ.30ರಿಂದ ವಿಚಾರಣೆ ನಡೆದು ಆರಂಭದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ್ ಶೆಟ್ಟಿ ಅಂತಿಮ ವಾದ ಮಂಡಿಸಿದ್ದರೆ, ನಂತರ ಆರೋಪಿಗಳ ಪರ ವಕೀಲರು ಪ್ರತಿವಾದವನ್ನು ಮಂಡಿಸಿದ್ದರು.

ವಾದ ಆಲಿಸಿರುವ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್., ಅಂತಿಮ ತೀರ್ಪನ್ನು ಮೇ 29ರಂದು ಪ್ರಕಟಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಿಶೇಷ ಸರಕಾರಿ ಅಭಿಯೋಜಕ ಶಾಂತರಾಮ ಶೆಟ್ಟಿ ಹಾಜರಿದ್ದರು.
ಪ್ರಕರಣದ ಪ್ರಮುಖ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ದೊರೆತರೆ, ಮಗ ನವನೀತ್ ಶೆಟ್ಟಿ ಹಾಗೂ ನಂದಳಿಕೆಯ ಜೋತಿಷ್ಯ ನಿರಂಜನ್ ಭಟ್ ಬೆಂಗಳೂರಿನ ಜೈಲಿನಲ್ಲಿದ್ದಾರೆ. ಸಾಕ್ಷ್ಯನಾಶ ಆರೋಪಿಗಳಾದ ನಿರಂಜನ್ ಭಟ್ ತಂದೆ ಶ್ರೀನಿವಾಸ ಭಟ್ ವಿಚಾರಣೆ ಮಧ್ಯೆ ಅನಾರೋಗ್ಯದಿಂದ ಮೃತಪಟ್ಟರೆ, ರಾಘವೇಂದ್ರ ಜಾಮೀನು ಪಡೆದುಕೊಂಡಿದ್ದಾರೆ.

ಆರೋಪಿಗಳು 2016ರ ಜು.28ರಂದು ಮಧ್ಯಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಡಲಾಗಿತ್ತು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಬೆಳಕಿಗೆ ಬಂದಿತ್ತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ನನ್ನು ಮತ್ತು ಆ. 8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.
Udupi Bhaskar Shetty murder cases final verdict by the court to be held on May 29th by Udupi court.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm