ಬ್ರೇಕಿಂಗ್ ನ್ಯೂಸ್
21-04-21 02:57 pm Mangalore Correspondent ಕರಾವಳಿ
ಮಂಗಳೂರು, ಎ.21: ಒಂದೆಡೆ ರಾತ್ರಿ ಕರ್ಫ್ಯೂ, ಇನ್ನೊಂದೆಡೆ ಹಗಲು ಹೊತ್ತಿನಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿ ರಾಜ್ಯ ಸರಕಾರ ಆದೇಶ ಮಾಡಿದೆ. ಇದರಂತೆ, ಹೊಟೇಲ್, ಕ್ಯಾಂಟೀನ್, ದರ್ಶಿನಿ ಕೇಂದ್ರಗಳು ಬಂದ್ ಆಗಿದ್ದು, ಊಟ, ತಿಂಡಿಯ ಅಗತ್ಯ ಇದ್ದವರು ಪಾರ್ಸೆಲ್ ಒಯ್ಯಬೇಕೆಂದು ಸೂಚನೆ ನೀಡಲಾಗಿದೆ. ಹೊಟೇಲ್ ಇಲ್ಲದೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಕರ್ತವ್ಯಕ್ಕೆ ನಿಯೋಜನೆ ಆಗಿರುವ ಪೊಲೀಸರಿಗೆ ಕಮಿಷನರ್ ಕಚೇರಿ ಹಿಂಭಾಗದ ಮೈದಾನದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.



ಪೊಲೀಸರೇ ಸೇರಿಕೊಂಡು ಮೈದಾನದಲ್ಲಿ ಊಟ ರೆಡಿ ಮಾಡುತ್ತಿದ್ದು, ಮೊದಲ ದಿನ 300 ಮಂದಿಗೆ ಊಟ ರೆಡಿ ಮಾಡಲಾಗಿತ್ತು. ಊಟ, ನೀರು ಸಿಗದೆ ಕರ್ತವ್ಯ ನಿರತ ಸಿಬಂದಿ ಪರದಾಟ ಅನುಭವಿಸಬಾರದು ಎಂಬ ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮುತುವರ್ಜಿ ವಹಿಸ್ಕೊಂಡು ಈ ವ್ಯವಸ್ಥೆ ಮಾಡಿದ್ದಾರೆ.




ಮಧ್ಯಾಹ್ನ 11 ಗಂಟೆಯಿಂದ ಮೂರು ಗಂಟೆ ವರೆಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆ ಆದವರು ತಾವೇ ಬಂದು ಊಟ ಮಾಡಿಕೊಂಡು ಹೋಗಲು ಸೂಚಿಸಲಾಗಿದೆ. ಈಗ 25 ಸಾವಿರ ರೂಪಾಯಿ ಕೈಯಿಂದಲೇ ಸುರಿದು ಊಟದ ವ್ಯವಸ್ಥೆಯನ್ನು ಆರಂಭಿಸಿದ್ದೇವೆ. ಸರಕಾರದಿಂದ ಹಣ ಕ್ಲೈಮ್ ಮಾಡಲು ಆಗುತ್ತದೆಯೇ ನೋಡಬೇಕು ಎಂದಿದ್ದಾರೆ ಕಮಿಷನರ್ ಶಶಿಕುಮಾರ್.




ಕಮಿಷನರ್ ಕಚೇರಿಗೆ ತೆರಳುವುದಕ್ಕೂ ನಿರ್ಬಂಧ
ಸಾಮಾನ್ಯವಾಗಿ ಕಮಿಷನರ್ ಕಚೇರಿಗೆ ನೂರಾರು ಮಂದಿ ಆಗಮಿಸುತ್ತಾರೆ. ವಿವಿಧ ರೀತಿಯ ಅಗತ್ಯ ಕೆಲಸಗಳನ್ನು ಮಾಡಿಸುವುದಕ್ಕಾಗಿ ಕಚೇರಿಗೆ ಅಲೆದಾಡುತ್ತಾರೆ. ಆದರೆ, ಕೋವಿಡ್ ನಿರ್ಬಂಧ ಕಾರಣದಿಂದ ಮಂಗಳೂರು ಕಮಿಷನರ್ ಕಚೇರಿಗೆ ನೇರವಾಗಿ ಹೋಗುವಂತಿಲ್ಲ. ಹೊರಭಾಗದಲ್ಲಿ ಕಿಯೋಸ್ಕ್ ಮಾಡಲಾಗಿದ್ದು, ಅಲ್ಲಿಯೇ ಅರ್ಜಿಗಳನ್ನು ಕೊಡಬೇಕು. ಅಗತ್ಯ ಇದ್ದರೆ ಮಾತ್ರ ಕಮಿಷನರ್ ಅಥವಾ ಡಿಸಿಪಿಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಗುತ್ತಿದೆ.
Night curfew in Karnataka, Mangalore Police Commissioner Shashi Kumar organises free food for Police Personnel till May 4th by his expenses. Police staff have highly appreciated commissioner for his commendable service.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm