ಬ್ರೇಕಿಂಗ್ ನ್ಯೂಸ್
21-04-21 05:49 pm Mangalore Correspondent ಕರಾವಳಿ
ಮಂಗಳೂರು, ಎ.21: ಮಂಗಳೂರು ನಗರದಲ್ಲಿ ಕೋವಿಡ್ ನಿರ್ಬಂಧಗಳ ನೆಪದಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚುತ್ತಿದ್ದರೆ, ಸ್ಕಿಲ್ ಗೇಮ್ ರೀತಿಯ ಇಸ್ಪೀಟ್ ಕ್ಲಬ್ ಗಳು ಸದ್ದಿಲ್ಲದೆ ಕಾರ್ಯಾಚರಿಸುತ್ತಿವೆ ಎನ್ನೋ ಮಾಹಿತಿ ಬೆಳಕಿಗೆ ಬಂದಿದೆ.
ಮೂರು ದಿನಗಳ ಹಿಂದೆ ಕೆಎಸ್ಸಾರ್ಟಿಸಿ ಬಳಿ ಇರುವ ಸ್ಕಿಲ್ ಗೇಮ್ ಕಂ ಇಸ್ಪೀಟ್ ಕ್ಲಬ್ಬಿಗೆ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದರು. ದಾಳಿ ವಿಚಾರ ತಿಳಿದು ಅಲ್ಲಿದ್ದ ಮಂದಿ, ತಪ್ಪಿಸಿಕೊಂಡು ಅದೇ ಕಟ್ಟಡದ ಕೆಳಗಿದ್ದ ಬಾರ್ ಗೆ ನುಗ್ಗಿದ್ದರು. ಮಹಾನಗರ ಪಾಲಿಕೆ ಅಧಿಕಾರಿಗಳು ಬಾರ್ ಗೆ ನುಗ್ಗಿದಾಗ, ಅಲ್ಲಿ ಸೇರಿದ್ದ ಜನರನ್ನು ನೋಡಿ ಗರಂ ಆದ್ರು. ಕೋವಿಡ್ ನಿಯಮವನ್ನೇ ಉಲ್ಲಂಘಿಸಿ, ಇಷ್ಟೊಂದು ಮಂದಿಯನ್ನು ಸೇರಿಸಿ ಬಾರ್ ನಡೆಸುತ್ತಿದ್ದೀರಲ್ಲಾ ಎಂದು ಬಾರ್ ಗೆ ಬೀಗ ಜಡಿಯಲು ಮುಂದಾಗಿದ್ದಾರೆ. ಅಲ್ಲದೆ, ಸ್ಥಳದಲ್ಲೇ ಬಾರ್ ಗೆ ಸೀಲ್ ಹೊಡೆದು ಅಲ್ಲಿಂದ ತೆರಳಿದ್ದಾರೆ.

ಆದರೆ, ಬಿಜೆಪಿ ಮುಖಂಡನಿಗೆ ಸೇರಿದ ಅಲ್ಲಿನ ಇಸ್ಪೀಟ್ ಕ್ಲಬ್ಬಿಗೆ ಪಾಲಿಕೆ ಅಧಿಕಾರಿಗಳು ಬೀಗ ಜಡಿದಿರಲಿಲ್ಲ. ಬಾರ್ ಮಾಲಕರು ಬಳಿಕ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳಲ್ಲಿ ಈ ಬಗ್ಗೆ ವಾಗ್ವಾದ ನಡೆಸಿದ್ದಾರೆ. ಆನಂತರ ಮರುದಿನ ಇಸ್ಪೀಟ್ ಕ್ಲಬ್ಬಿಗೂ ಬೀಗ ಜಡಿದಿದ್ದಾರೆ. ಈ ವೇಳೆ, ವಿಷ್ಯ ಹೊರಗೆ ಬಂದಿದ್ದು ಕೆಲವರು ಹೇಳುವ ಪ್ರಕಾರ ಮಂಗಳೂರು ನಗರದಲ್ಲಿ 12ಕ್ಕೂ ಹೆಚ್ಚು ಕಡೆ ಈ ರೀತಿಯ ಇಸ್ಪೀಟ್ ಕ್ಲಬ್ ಗಳು ಕಾರ್ಯಾಚರಣೆ ನಡೆಸುತ್ತಿವೆಯಂತೆ.

ಕಾರ್ಪೊರೇಟರ್ ವಿನಯರಾಜ್ ಹೇಳುವ ಪ್ರಕಾರ, ಮಂಗಳೂರು ನಗರದಲ್ಲಿ 12ಕ್ಕೂ ಹೆಚ್ಚು ಕಡೆ ಈ ರೀತಿಯ ಇಸ್ಪೀಟ್ ಕ್ಲಬ್ ಗಳಿವೆ. ಇದು ಇಲ್ಲಿನ ಪೊಲೀಸರಿಗೆ ಮತ್ತು ಕಾರ್ಪೊರೇಶನ್ ಅಧಿಕಾರಿಗಳಿಗೂ ಗೊತ್ತಿದೆ. ಈಗ ಯಾಕೆ ದಾಳಿ ನಡೆಸುವುದಿಲ್ಲ. ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಎಲ್ಲವೂ ಲೈಸನ್ಸ್ ಇಲ್ಲದೆ ನಡೆಯುತ್ತಿರುವ ದಂಧೆಗಳು. ಸ್ಕಿಲ್ ಗೇಮ್ ಎಂದು ಕೆಲವು ಕಡೆ ಲೈಸನ್ಸ್ ಪಡೆದಿದ್ದರೂ, ಅದರೊಳಗೆ ಇಸ್ಪೀಟ್ ಎಲೆಗಳ ಜೂಜಾಟ ನಡೆಯುತ್ತವೆ ಎನ್ನುತ್ತಾರೆ.

ಮಂಗಳಾದೇವಿ, ಬಂದರು, ಕಂಕನಾಡಿ, ಬಿಜೈ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಈ ರೀತಿಯ ಇಸ್ಪೀಟ್ ಅಡ್ಡೆಗಳಿದ್ದು, ಪೊಲೀಸರಿಗೆ ಮಾಮೂಲು ಕೊಟ್ಟುಕೊಂಡೇ ನಡೆಯುತ್ತಿವೆ. ಕಳೆದ ಬಾರಿ ಕೋವಿಡ್ ಲಾಕ್ಡೌನ್ ಇದ್ದಾಗಲೂ ಆಯಕಟ್ಟಿನ ಜಾಗಗಳಲ್ಲಿ ಈ ದಂಧೆ ನಡೆದಿತ್ತು. ಈಗಲೂ ಅದೇ ರೀತಿಯ ದಂಧೆ ಯಾವುದೇ ಎಗ್ಗಿಲ್ಲದೆ ನಡೆಯುತ್ತಿದೆ. ಇದರಲ್ಲಿ ಕಾಂಗ್ರಸ್ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರಿದ್ದಾರೆ. ಬಿಜೆಪಿ ಪ್ರಭಾವಿ ನಾಯಕರ ಆಪ್ತರೇ ಈ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕಮಿಷನರ್ ಸಾಹೇಬ್ರೇ ಮಂಗಳೂರಿನ ಇಸ್ಪೀಟ್ ಅಡ್ಡೆಗಳ ಸದ್ದು ನಿಮ್ಮ ಕಿವಿಗೆ ಬಿದ್ದಿಲ್ಲವೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ.
Amid Covid wave in Mangalore Ilegal skill games have been running without any fear in the city. Most of them are owned by BJP top leaders aides alleges Congress leader and corporater Vinay raj.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm