ಬ್ರೇಕಿಂಗ್ ನ್ಯೂಸ್
22-04-21 11:44 am Mangalore Correspondent ಕರಾವಳಿ
ಮಂಗಳೂರು, ಎ.22: ಚಾಲಕನ ಬೇಜವಾಬ್ದಾರಿಯಿಂದ ಕಸ ವಿಲೇವಾರಿ ಮಾಡುವ ಟ್ರಕ್ ಇಳಿಜಾರಿನಲ್ಲಿ ನೇರವಾಗಿ ನುಗ್ಗಿ ಬಂದು ನಾಲ್ಕಾರು ವಾಹನಗಳಿಗೆ ಡಿಕ್ಕಿಯಾಗಿದ್ದಲ್ಲದೆ, ಮಾರುಕಟ್ಟೆಯ ಅಂಗಡಿಗಳಿಗೆ ನುಗ್ಗಿದ ಘಟನೆ ಕಂಕನಾಡಿ ಮಾರುಕಟ್ಟೆಯಲ್ಲಿ ನಡೆದಿದೆ.


ಮಂಗಳೂರು ನಗರದಲ್ಲಿ ಕಸ ಹೆಕ್ಕಲು ಗುತ್ತಿಗೆ ಪಡೆದಿರುವ ಆಂಟನಿ ವೇಸ್ಟ್ ಕಂಪನಿಯ ಟ್ರಕ್ಕನ್ನು ಚಾಲಕ ಕಂಕನಾಡಿ ಮಾರುಕಟ್ಟೆ ಬಳಿ ನಿಲ್ಲಿಸಿ, ಕೆಳಕ್ಕೆ ಇಳಿದಿದ್ದ. ಹಿಂದಿನಿಂದ ಕಾರ್ಮಿಕರು ಕಸ ತುಂಬಿಸುತ್ತಿದ್ದರು. ಚಾಲಕ ವಾಹನವನ್ನು ನ್ಯೂಟ್ರಲ್ ನಲ್ಲಿರಿಸಿ ಇಳಿದಿದ್ದರಿಂದ ಟ್ರಕ್ ಕೆಳಗೆ ಇಳಿದಿದ್ದು, ಅಲ್ಲಿದ್ದ ಮೂರು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದಿದ್ದಲ್ಲದೆ, ಇಂಡಿಯನ್ ಚಿಕನ್ ಎನ್ನುವ ಕೋಳಿ ಮಾಂಸದ ಅಂಗಡಿಗೆ ನುಗ್ಗಿ ಜಖಂ ಮಾಡಿದೆ.



ಚಿಕನ್ ಶಾಪ್ ಎದುರಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟರ್ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಅಂಗಡಿಯ ಇಬ್ಬರು ಸಿಬಂದಿ ಕಾಲಿಗೆ ಗಾಯಗೊಂಡಿದ್ದಾರೆ. ಟ್ರಕ್ ಅಂಗಡಿಯ ಮುಂಭಾಗಕ್ಕೆ ಬಡಿದು ನಿಂತಿದ್ದು, ಕೂಡಲೇ ಅದಕ್ಕೆ ಹತ್ತಿದ ಸ್ಥಳೀಯರು ವಾಹನವನ್ನು ಆಫ್ ಮಾಡಿದ್ದಾರೆ. ಘಟನೆ ಸಂದರ್ಭ ಹೆಚ್ಚು ಜನರು ಇಲ್ಲದ ಕಾರಣ ಪ್ರಾಣಾಪಾಯ ಆಗಿಲ್ಲ. ಸಾರ್ವಜನಿಕರು ಟ್ರಕ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ, ಆತ ಅಲ್ಲಿಂದ ಪರಾರಿಯಾಗಿದ್ದಾನೆ.



ಸ್ಥಳೀಯರ ಪ್ರಕಾರ, ಟ್ರಕ್ ಚಾಲಕ ಕೆಳಗಿಳಿದು ಮೊಬೈಲಲ್ಲಿ ಮಾತನಾಡುತ್ತಿದ್ದ. ಟ್ರಕ್ಕನ್ನು ನ್ಯೂಟ್ರಲ್ ನಲ್ಲಿರಿಸಿ ಕೆಳಕ್ಕೆ ಇಳಿದಿದ್ದೇ ತಪ್ಪು. ಆತನನ್ನು ಈ ಘಟನೆಗೆ ಹೊಣೆಯಾಗಿಸಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಂಕನಾಡಿ ಮತ್ತು ಟ್ರಾಫಿಕ್ ಪೊಲೀಸರು ಆಗಮಿಸಿ ಲಾರಿಯನ್ನು ತೆರವು ಮಾಡಿ ವಶಕ್ಕೆ ಪಡೆದಿದ್ದಾರೆ.
Four Cars and two wheelers completely damaged after a Mcc Antony Waste truck entered a Chicken Shop in Kankanady Market in Mangalore. The accident took place as driver kept the truck in nutral and got down of the truck.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm