ಬ್ರೇಕಿಂಗ್ ನ್ಯೂಸ್
22-04-21 11:44 am Mangalore Correspondent ಕರಾವಳಿ
ಮಂಗಳೂರು, ಎ.22: ಚಾಲಕನ ಬೇಜವಾಬ್ದಾರಿಯಿಂದ ಕಸ ವಿಲೇವಾರಿ ಮಾಡುವ ಟ್ರಕ್ ಇಳಿಜಾರಿನಲ್ಲಿ ನೇರವಾಗಿ ನುಗ್ಗಿ ಬಂದು ನಾಲ್ಕಾರು ವಾಹನಗಳಿಗೆ ಡಿಕ್ಕಿಯಾಗಿದ್ದಲ್ಲದೆ, ಮಾರುಕಟ್ಟೆಯ ಅಂಗಡಿಗಳಿಗೆ ನುಗ್ಗಿದ ಘಟನೆ ಕಂಕನಾಡಿ ಮಾರುಕಟ್ಟೆಯಲ್ಲಿ ನಡೆದಿದೆ.


ಮಂಗಳೂರು ನಗರದಲ್ಲಿ ಕಸ ಹೆಕ್ಕಲು ಗುತ್ತಿಗೆ ಪಡೆದಿರುವ ಆಂಟನಿ ವೇಸ್ಟ್ ಕಂಪನಿಯ ಟ್ರಕ್ಕನ್ನು ಚಾಲಕ ಕಂಕನಾಡಿ ಮಾರುಕಟ್ಟೆ ಬಳಿ ನಿಲ್ಲಿಸಿ, ಕೆಳಕ್ಕೆ ಇಳಿದಿದ್ದ. ಹಿಂದಿನಿಂದ ಕಾರ್ಮಿಕರು ಕಸ ತುಂಬಿಸುತ್ತಿದ್ದರು. ಚಾಲಕ ವಾಹನವನ್ನು ನ್ಯೂಟ್ರಲ್ ನಲ್ಲಿರಿಸಿ ಇಳಿದಿದ್ದರಿಂದ ಟ್ರಕ್ ಕೆಳಗೆ ಇಳಿದಿದ್ದು, ಅಲ್ಲಿದ್ದ ಮೂರು ಕಾರು ಮತ್ತು ಎರಡು ದ್ವಿಚಕ್ರ ವಾಹನಗಳ ಮೇಲೆ ಹರಿದಿದ್ದಲ್ಲದೆ, ಇಂಡಿಯನ್ ಚಿಕನ್ ಎನ್ನುವ ಕೋಳಿ ಮಾಂಸದ ಅಂಗಡಿಗೆ ನುಗ್ಗಿ ಜಖಂ ಮಾಡಿದೆ.



ಚಿಕನ್ ಶಾಪ್ ಎದುರಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಸ್ಕೂಟರ್ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಅಂಗಡಿಯ ಇಬ್ಬರು ಸಿಬಂದಿ ಕಾಲಿಗೆ ಗಾಯಗೊಂಡಿದ್ದಾರೆ. ಟ್ರಕ್ ಅಂಗಡಿಯ ಮುಂಭಾಗಕ್ಕೆ ಬಡಿದು ನಿಂತಿದ್ದು, ಕೂಡಲೇ ಅದಕ್ಕೆ ಹತ್ತಿದ ಸ್ಥಳೀಯರು ವಾಹನವನ್ನು ಆಫ್ ಮಾಡಿದ್ದಾರೆ. ಘಟನೆ ಸಂದರ್ಭ ಹೆಚ್ಚು ಜನರು ಇಲ್ಲದ ಕಾರಣ ಪ್ರಾಣಾಪಾಯ ಆಗಿಲ್ಲ. ಸಾರ್ವಜನಿಕರು ಟ್ರಕ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ, ಆತ ಅಲ್ಲಿಂದ ಪರಾರಿಯಾಗಿದ್ದಾನೆ.



ಸ್ಥಳೀಯರ ಪ್ರಕಾರ, ಟ್ರಕ್ ಚಾಲಕ ಕೆಳಗಿಳಿದು ಮೊಬೈಲಲ್ಲಿ ಮಾತನಾಡುತ್ತಿದ್ದ. ಟ್ರಕ್ಕನ್ನು ನ್ಯೂಟ್ರಲ್ ನಲ್ಲಿರಿಸಿ ಕೆಳಕ್ಕೆ ಇಳಿದಿದ್ದೇ ತಪ್ಪು. ಆತನನ್ನು ಈ ಘಟನೆಗೆ ಹೊಣೆಯಾಗಿಸಬೇಕೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಕಂಕನಾಡಿ ಮತ್ತು ಟ್ರಾಫಿಕ್ ಪೊಲೀಸರು ಆಗಮಿಸಿ ಲಾರಿಯನ್ನು ತೆರವು ಮಾಡಿ ವಶಕ್ಕೆ ಪಡೆದಿದ್ದಾರೆ.
Four Cars and two wheelers completely damaged after a Mcc Antony Waste truck entered a Chicken Shop in Kankanady Market in Mangalore. The accident took place as driver kept the truck in nutral and got down of the truck.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm