ಬ್ರೇಕಿಂಗ್ ನ್ಯೂಸ್
22-04-21 07:25 pm Mangaluru correspondent ಕರಾವಳಿ
ಮಂಗಳೂರು, ಎ.22: ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗತ್ಯ ಸಾಮಗ್ರಿಗಳ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪ್, ಕಚೇರಿ ವ್ಯಾಪಾರ ಸಂಕೀರ್ಣಗಳನ್ನು ಕಟ್ಟುನಿಟ್ಟಾಗಿ ಬಂದ್ ಮಾಡುವಂತೆ ಹೇಳಿಕೊಂಡು ಹೋಗಿದ್ದಾರೆ.

ಗುರುವಾರ ಸಂಜೆ ದಿಢೀರ್ ಆಗಿ ಪಾಲಿಕೆಯ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಬಟ್ಟೆ ಶಾಪ್, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ನಗರದ ಹಂಪನಕಟ್ಟೆ, ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ಎಲ್ಲ ರೀತಿಯ ಅಂಗಡಿಗಳನ್ನು ತೆರೆದಿದ್ದು ಎಂದಿನಂತೆ ವ್ಯಾಪಾರ ನಡೆಸುತ್ತಿದ್ದವು.


ರಾಜ್ಯ ಸರಕಾರ ಹೊರಡಿಸಿರುವ ಗೈಡ್ ಲೈನ್ಸ್ ಪ್ರಕಾರ, ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಂಗಡಿಗಳು, ಶಾಪ್ ಗಳನ್ನು ತೆರೆಯುವಂತಿಲ್ಲ. ಅದರಂತೆ, ಮಾರ್ಗಸೂಚಿಯ ಬಗ್ಗೆ ವ್ಯಾಪಾರಸ್ಥರಿಗೆ ಅರಿವು ಮೂಡಿಸುವುದಕ್ಕಾಗಿ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತರಕಾರಿ, ದೀನಸಿ ಸಾಮಗ್ರಿ, ಹಾಲು, ಪೆಟ್ರೋಲ್, ಹೊಟೇಲ್, ಆಹಾರ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಬೇಕರಿ ಇನ್ನಿತರ ಅಂಗಡಿಗಳು, ಬ್ಯಾಂಕ್, ವಿಮಾ ಕಚೇರಿಗಳು ಹೀಗೆ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಸಾಮಗ್ರಿಗಳನ್ನು ಹೊರತುಪಡಿಸಿ ಇತರೇ ವ್ಯಾಪಾರ ಸಂಕೀರ್ಣಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

ಎಪ್ರಿಲ್ 21ರಿಂದ ಮೇ 4ರ ವರೆಗಿನ ಅರೆ ಲಾಕ್ಡೌನ್ ಘೋಷಣೆಯಲ್ಲಿ ಇದನ್ನು ಒಳಗೊಳಿಸಿಯೇ ಆದೇಶ ಮಾಡಲಾಗಿತ್ತು. ಆದರೆ, ಮೊದಲ ದಿನವಾದ ಎಪ್ರಿಲ್ 21ರಂದು ಇತರೇ ದಿನಗಳಂತೇ ಎಲ್ಲ ರೀತಿಯ ಅಂಗಡಿ, ಶಾಪ್ ಗಳನ್ನು ತೆರೆದು ವ್ಯಾಪಾರಸ್ಥರು ವ್ಯಾಪಾರ ನಡೆಸಿದ್ದರು. ಇದು ತಿಳಿಯುತ್ತಿದ್ದಂತೇ ಬೆಂಗಳೂರು, ಮಂಗಳೂರು ಸೇರಿ ರಾಜ್ಯದಾದ್ಯಂತ ಕೆಳಹಂತದ ಅಧಿಕಾರಿಗಳಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಸೂಚನೆ ನೀಡಲಾಗಿದೆ. ಅದರ ಪ್ರಕಾರ, ಸಂಜೆ ಹೊತ್ತಿಗೆ ಅಲರ್ಟ್ ಮಾಡುತ್ತಾ ಅಧಿಕಾರಿಗಳು ಸಾಗಿದ್ದಾರೆ. ನಾಳೆಯೂ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಅಂಗಡಿ, ಶಾಪ್ ಗಳನ್ನು ತೆರೆದರೆ ದಂಡ ಕಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
The Mangalore Mcc authorities close down shops that were open even after strict government orders on Night Curfew.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm