ಬ್ರೇಕಿಂಗ್ ನ್ಯೂಸ್
22-04-21 07:25 pm Mangaluru correspondent ಕರಾವಳಿ
ಮಂಗಳೂರು, ಎ.22: ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗತ್ಯ ಸಾಮಗ್ರಿಗಳ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪ್, ಕಚೇರಿ ವ್ಯಾಪಾರ ಸಂಕೀರ್ಣಗಳನ್ನು ಕಟ್ಟುನಿಟ್ಟಾಗಿ ಬಂದ್ ಮಾಡುವಂತೆ ಹೇಳಿಕೊಂಡು ಹೋಗಿದ್ದಾರೆ.
ಗುರುವಾರ ಸಂಜೆ ದಿಢೀರ್ ಆಗಿ ಪಾಲಿಕೆಯ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಬಟ್ಟೆ ಶಾಪ್, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ನಗರದ ಹಂಪನಕಟ್ಟೆ, ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ಎಲ್ಲ ರೀತಿಯ ಅಂಗಡಿಗಳನ್ನು ತೆರೆದಿದ್ದು ಎಂದಿನಂತೆ ವ್ಯಾಪಾರ ನಡೆಸುತ್ತಿದ್ದವು.
ರಾಜ್ಯ ಸರಕಾರ ಹೊರಡಿಸಿರುವ ಗೈಡ್ ಲೈನ್ಸ್ ಪ್ರಕಾರ, ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಂಗಡಿಗಳು, ಶಾಪ್ ಗಳನ್ನು ತೆರೆಯುವಂತಿಲ್ಲ. ಅದರಂತೆ, ಮಾರ್ಗಸೂಚಿಯ ಬಗ್ಗೆ ವ್ಯಾಪಾರಸ್ಥರಿಗೆ ಅರಿವು ಮೂಡಿಸುವುದಕ್ಕಾಗಿ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತರಕಾರಿ, ದೀನಸಿ ಸಾಮಗ್ರಿ, ಹಾಲು, ಪೆಟ್ರೋಲ್, ಹೊಟೇಲ್, ಆಹಾರ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಬೇಕರಿ ಇನ್ನಿತರ ಅಂಗಡಿಗಳು, ಬ್ಯಾಂಕ್, ವಿಮಾ ಕಚೇರಿಗಳು ಹೀಗೆ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಸಾಮಗ್ರಿಗಳನ್ನು ಹೊರತುಪಡಿಸಿ ಇತರೇ ವ್ಯಾಪಾರ ಸಂಕೀರ್ಣಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.
ಎಪ್ರಿಲ್ 21ರಿಂದ ಮೇ 4ರ ವರೆಗಿನ ಅರೆ ಲಾಕ್ಡೌನ್ ಘೋಷಣೆಯಲ್ಲಿ ಇದನ್ನು ಒಳಗೊಳಿಸಿಯೇ ಆದೇಶ ಮಾಡಲಾಗಿತ್ತು. ಆದರೆ, ಮೊದಲ ದಿನವಾದ ಎಪ್ರಿಲ್ 21ರಂದು ಇತರೇ ದಿನಗಳಂತೇ ಎಲ್ಲ ರೀತಿಯ ಅಂಗಡಿ, ಶಾಪ್ ಗಳನ್ನು ತೆರೆದು ವ್ಯಾಪಾರಸ್ಥರು ವ್ಯಾಪಾರ ನಡೆಸಿದ್ದರು. ಇದು ತಿಳಿಯುತ್ತಿದ್ದಂತೇ ಬೆಂಗಳೂರು, ಮಂಗಳೂರು ಸೇರಿ ರಾಜ್ಯದಾದ್ಯಂತ ಕೆಳಹಂತದ ಅಧಿಕಾರಿಗಳಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಸೂಚನೆ ನೀಡಲಾಗಿದೆ. ಅದರ ಪ್ರಕಾರ, ಸಂಜೆ ಹೊತ್ತಿಗೆ ಅಲರ್ಟ್ ಮಾಡುತ್ತಾ ಅಧಿಕಾರಿಗಳು ಸಾಗಿದ್ದಾರೆ. ನಾಳೆಯೂ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಅಂಗಡಿ, ಶಾಪ್ ಗಳನ್ನು ತೆರೆದರೆ ದಂಡ ಕಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
The Mangalore Mcc authorities close down shops that were open even after strict government orders on Night Curfew.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm