ಬ್ರೇಕಿಂಗ್ ನ್ಯೂಸ್
22-04-21 07:25 pm Mangaluru correspondent ಕರಾವಳಿ
ಮಂಗಳೂರು, ಎ.22: ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಗತ್ಯ ಸಾಮಗ್ರಿಗಳ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪ್, ಕಚೇರಿ ವ್ಯಾಪಾರ ಸಂಕೀರ್ಣಗಳನ್ನು ಕಟ್ಟುನಿಟ್ಟಾಗಿ ಬಂದ್ ಮಾಡುವಂತೆ ಹೇಳಿಕೊಂಡು ಹೋಗಿದ್ದಾರೆ.

ಗುರುವಾರ ಸಂಜೆ ದಿಢೀರ್ ಆಗಿ ಪಾಲಿಕೆಯ ಅಧಿಕಾರಿಗಳು ಪೊಲೀಸರ ಜೊತೆಗೂಡಿ ಬಟ್ಟೆ ಶಾಪ್, ಚಪ್ಪಲಿ ಅಂಗಡಿ, ಮೊಬೈಲ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ. ನಗರದ ಹಂಪನಕಟ್ಟೆ, ಸೆಂಟ್ರಲ್ ಮಾರುಕಟ್ಟೆ, ಸ್ಟೇಟ್ ಬ್ಯಾಂಕ್ ಪರಿಸರದಲ್ಲಿ ಎಲ್ಲ ರೀತಿಯ ಅಂಗಡಿಗಳನ್ನು ತೆರೆದಿದ್ದು ಎಂದಿನಂತೆ ವ್ಯಾಪಾರ ನಡೆಸುತ್ತಿದ್ದವು.


ರಾಜ್ಯ ಸರಕಾರ ಹೊರಡಿಸಿರುವ ಗೈಡ್ ಲೈನ್ಸ್ ಪ್ರಕಾರ, ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಉಳಿದ ಯಾವುದೇ ಅಂಗಡಿಗಳು, ಶಾಪ್ ಗಳನ್ನು ತೆರೆಯುವಂತಿಲ್ಲ. ಅದರಂತೆ, ಮಾರ್ಗಸೂಚಿಯ ಬಗ್ಗೆ ವ್ಯಾಪಾರಸ್ಥರಿಗೆ ಅರಿವು ಮೂಡಿಸುವುದಕ್ಕಾಗಿ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತರಕಾರಿ, ದೀನಸಿ ಸಾಮಗ್ರಿ, ಹಾಲು, ಪೆಟ್ರೋಲ್, ಹೊಟೇಲ್, ಆಹಾರ ವಸ್ತುಗಳ ಉತ್ಪಾದನೆ ಮತ್ತು ಮಾರಾಟದ ಬೇಕರಿ ಇನ್ನಿತರ ಅಂಗಡಿಗಳು, ಬ್ಯಾಂಕ್, ವಿಮಾ ಕಚೇರಿಗಳು ಹೀಗೆ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಸಾಮಗ್ರಿಗಳನ್ನು ಹೊರತುಪಡಿಸಿ ಇತರೇ ವ್ಯಾಪಾರ ಸಂಕೀರ್ಣಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

ಎಪ್ರಿಲ್ 21ರಿಂದ ಮೇ 4ರ ವರೆಗಿನ ಅರೆ ಲಾಕ್ಡೌನ್ ಘೋಷಣೆಯಲ್ಲಿ ಇದನ್ನು ಒಳಗೊಳಿಸಿಯೇ ಆದೇಶ ಮಾಡಲಾಗಿತ್ತು. ಆದರೆ, ಮೊದಲ ದಿನವಾದ ಎಪ್ರಿಲ್ 21ರಂದು ಇತರೇ ದಿನಗಳಂತೇ ಎಲ್ಲ ರೀತಿಯ ಅಂಗಡಿ, ಶಾಪ್ ಗಳನ್ನು ತೆರೆದು ವ್ಯಾಪಾರಸ್ಥರು ವ್ಯಾಪಾರ ನಡೆಸಿದ್ದರು. ಇದು ತಿಳಿಯುತ್ತಿದ್ದಂತೇ ಬೆಂಗಳೂರು, ಮಂಗಳೂರು ಸೇರಿ ರಾಜ್ಯದಾದ್ಯಂತ ಕೆಳಹಂತದ ಅಧಿಕಾರಿಗಳಿಗೆ ಈ ಬಗ್ಗೆ ಅರಿವು ಮೂಡಿಸುವಂತೆ ಸೂಚನೆ ನೀಡಲಾಗಿದೆ. ಅದರ ಪ್ರಕಾರ, ಸಂಜೆ ಹೊತ್ತಿಗೆ ಅಲರ್ಟ್ ಮಾಡುತ್ತಾ ಅಧಿಕಾರಿಗಳು ಸಾಗಿದ್ದಾರೆ. ನಾಳೆಯೂ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಅಂಗಡಿ, ಶಾಪ್ ಗಳನ್ನು ತೆರೆದರೆ ದಂಡ ಕಟ್ಟಬೇಕು ಎಂದು ಸೂಚನೆ ನೀಡಿದ್ದಾರೆ.
The Mangalore Mcc authorities close down shops that were open even after strict government orders on Night Curfew.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm