ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.
ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.
ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm