ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.

ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm