ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.

ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm