ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.

ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm