ಬ್ರೇಕಿಂಗ್ ನ್ಯೂಸ್
23-04-21 07:02 pm Mangaluru correspondent ಕರಾವಳಿ
ಕೊಣಾಜೆ, ಎ.23: ಕೊರೊನಾ ಸೋಂಕಿನ ಹಿನ್ನೆಲೆ ರಾಜ್ಯದೆಲ್ಲೆಡೆ ಕರ್ಫ್ಯೂ, ಅಘೋಷಿತ ಬಂದ್ ವಾತಾವರಣ ನೆಲೆಸಿದ್ದರೆ ಕೊಣಾಜೆ ಠಾಣೆ ಸಮೀಪದ ಪರಂಡೆ ಎಂಬಲ್ಲಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು. ಮಾಹಿತಿ ಪಡೆದ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯಲ್ಲಿ ಕೆಲವು ಪೊಲೀಸರ ಹಿಂಬಾಗಿಲ ಸಹಕಾರದಿಂದ ಅಕ್ರಮ ಕೋಳಿ ಅಂಕಗಳು ನಡೆಯುವುದು ಮಾಮೂಲಿ ಆಗಿದೆ. ಆದರೆ ಈಗ ಕೊರೊನಾ ಭೀತಿಯಲ್ಲಿ ಅಧಿಕಾರಿಗಳು, ಪೊಲೀಸರೆಲ್ಲ ಸೇರಿ ಊರಿನೆಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದರೆ, ಇದರ ಗೊಡವೆಯೇ ಇಲ್ಲ ಎಂಬಂತೆ ಕೊಣಾಜೆ ಬಳಿ ಭಾರೀ ಕೋಳಿ ಅಂಕ ಏರ್ಪಡಿಸಲಾಗಿತ್ತು. ಮಧ್ಯಾಹ್ನದ ಬಳಿಕ ನೂರಾರು ಜೂಜು ಪ್ರಿಯರನ್ನು ಒಟ್ಟು ಸೇರಿಸಿ ಅಕ್ರಮ ಕೋಳಿ ಅಂಕ ನಡೆಸಲಾಗುತ್ತಿತ್ತು.

ಕೊಣಾಜೆ ಪೊಲೀಸ್ ಠಾಣೆಯಿಂದ 3 ಕಿಮೀ ದೂರದ ಪರಂಡೆ ಎಂಬಲ್ಲಿ ಸ್ಥಳೀಯ ಕುಟುಂಬವೊಂದಕ್ಕೆ ಸಂಬಂಧಿಸಿದ ವಾರ್ಷಿಕ ಕೋಲ ನಡೆದಿದ್ದು ಆ ಪ್ರದೇಶದಲ್ಲೇ ಕೊರೊನಾ ಕಟ್ಟುನಿಟ್ಟಿನ ಆದೇಶಗಳನ್ನು ಧಿಕ್ಕರಿಸಿ ಕೋಳಿ ಅಂಕ ನಡೆಸಲಾಗುತ್ತಿತ್ತು. ಈ ಬಗ್ಗೆ ಸ್ಥಳೀಯರೋರ್ವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದು ಅಕ್ರಮ ಕೋಳಿ ಅಂಕದೆಡೆಗೆ ರಹಸ್ಯ ಕ್ಯಾಮೆರಾ ಚಲಾಯಿಸಲು ನಮ್ಮ ಪ್ರತಿನಿಧಿ ತೆರಳಿದಾಗ ಅದಾಗಲೇ ಅಲ್ಲಿ ಕೊಣಾಜೆ ಪೊಲೀಸರ ಎಂಟ್ರಿ ಆಗಿ ಜೂಜುಕೋರರೆಲ್ಲ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ.

ಸ್ಥಳೀಯರು ಅಕ್ರಮ ಕೋಳಿ ಅಂಕದ ಬಗ್ಗೆ ರಹಸ್ಯವಾಗಿ ಪೊಲೀಸರಿಗೆ ದೂರಿರುವುದಾಗಿ ತಿಳಿದು ಬಂದಿದೆ. ಹಾಗಾಗಿ ಕೊಣಾಜೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಅಂಕವನ್ನು ನಿಲ್ಲಿಸಿದ್ದಾರೆ. ಜೂಜಿನಲ್ಲಿ ನಿರತರಾಗಿದ್ದ 7 ಮಂದಿ ಮತ್ತು ಅಂಕದ ಕೋಳಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
The Konaje Police raid on Cockfight event and take seven persons into Custody. The public alleged that amid covid tough guidelines the event was organised without anyone's fear.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm