ಬ್ರೇಕಿಂಗ್ ನ್ಯೂಸ್
24-04-21 02:36 pm Udupi Correspondent ಕರಾವಳಿ
ಉಡುಪಿ, ಎ.24: ಎಲ್ಲೆಡೆ ಕೋವಿಡ್ ಜಾಗೃತಿ, ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿರುವ ಮಧ್ಯೆ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮೆಹಂದಿ ಕಾರ್ಯಕ್ರಮಮದಲ್ಲಿ ಭಾಗಿಯಾಗಿ ಸುದ್ದಿಯಾಗಿದ್ದಾರೆ. ಉಡುಪಿಯಲ್ಲಿ ಬೀದಿಗಿಳಿದು ಜನರನ್ನು ರೈಟ್ ಲೆಫ್ಟ್ ತೆಗೆದುಕೊಂಡಿದ್ದ ಜಿಲ್ಲಾಧಿಕಾರಿಯೇ ಸ್ವತಃ ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಇಲ್ಲದೆ ಮೆಹಂದಿಯಲ್ಲಿ ಪಾಲ್ಗೊಂಡಿದ್ದ ಫೋಟೊವನ್ನು ಮುಂದಿಟ್ಟು ಸಾಮಾಜಿಕ ಜಾಲತಾಣದಲ್ಲಿ ಜನರು ಭಾರೀ ಕೀಟಲೆ ಮಾಡಿದ್ದಾರೆ.

ಎಎಸ್ಪಿ ಒಬ್ಬರ ಪುತ್ರಿಯ ಮದುವೆಯ ಮೆಹಂದಿ ಕಾರ್ಯಕ್ರಮ ಹಾಲ್ ಒಂದರಲ್ಲಿ ನಡೆದಿದ್ದು, ಅದರಲ್ಲಿ ಜಿಲ್ಲಾಧಿಕಾರಿ ಡಾ.ಕೆ. ಜಗದೀಶ್ ಪಾಲ್ಗೊಂಡಿದ್ದ ಫೋಟೋ ವೈರಲ್ ಆಗಿತ್ತು. ಮಾಸ್ಕ್ ಹಾಕದೇ ಹುಡುಗಿ ಮತ್ತು ಇತರ ಸಂಬಂಧಿಕರ ಜೊತೆ ಅಕ್ಕ ಪಕ್ಕದಲ್ಲಿ ನಿಂತಿದ್ದ ಫೋಟೋದ ಬಗ್ಗೆ ಜನರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಟ್ಸಪ್ ಮತ್ತು ಫೇಸ್ಬುಕ್ ನಲ್ಲಿ ಈ ಬಗ್ಗೆ ಆಕ್ರೋಶದ ಮಾತುಗಳನ್ನು ಬರೆದಿದ್ದಾರೆ.

ಮೊನ್ನೆಯಷ್ಟೇ ಬಸ್ಸಿನಲ್ಲಿ ಹೋಗುತ್ತಿದ್ದ ಕಾಲೇಜು ಹುಡುಗಿಯರನ್ನು ಅರ್ಧಕ್ಕೆ ಇಳಿಸಿ, ಕೋವಿಡ್ ನಿಯಮದ ಪ್ರಕಾರ ಬಸ್ಸಿನಲ್ಲಿ ನಿಂತುಕೊಂಡು ಸಾಗುವಂತಿಲ್ಲ. ಬಸ್ಸಿನಲ್ಲಿ ಇಷ್ಟೊಂದು ಮಂದಿ ಹೋಗುವುದಾದರೆ ಕೋವಿಡ್ ನಿಮಯ ಎಲ್ಲಿ ಪಾಲನೆಯಾಗುತ್ತದೆ ಎಂದು ಬಸ್ಸಿನಿಂದ ಅರ್ಧ ದಾರಿಯಲ್ಲೇ ನಿಲ್ಲಿಸಿ ವಿದ್ಯಾರ್ಥಿನಿಯರನ್ನು ಗದರಿದ್ದರು. ಇದೇ ವೇಳೆ, ಕೆಲವು ವಿದ್ಯಾರ್ಥಿನಿಯರು ನಾವು ತುಂಬ ದೂರ ಹೋಗಬೇಕು. ಈ ಬಸ್ ಬಿಟ್ಟರೆ ನಮಗೆ ಆನಂತರ ಬಸ್ ಸಿಗಲ್ಲ. ಮನೆ ತಲುಪುವಾಗ ಲೇಟ್ ಆಗುತ್ತೆ. ಹೆಚ್ಚುವರಿ ಬಸ್ ಬಿಡದೆ ಏಕಾಏಕಿ ಬಸ್ಸಿನಿಂದ ಇಳಿಸಿದರೆ ಸಂಜೆಯ ಹೊತ್ತಿಗೆ ನಾವೇನು ಮಾಡಬೇಕು ಎಂದು ನೋವು ತೋಡಿಕೊಂಡಿದ್ದರು. ಇದರ ವಿಡಿಯೋ ಭಾರೀ ವೈರಲ್ ಆಗಿತ್ತಲ್ಲದೆ, ಜಿಲ್ಲಾಧಿಕಾರಿಯ ನಡೆಗೆ ವಿರೋಧವೂ ಕೇಳಿಬಂದಿತ್ತು.
ಇದೀಗ ಕಾನೂನು ಹೇರುವ, ಪಾಲನೆ ಮಾಡುವ ಜಿಲ್ಲಾಧಿಕಾರಿಯೇ ಸ್ವತಃ ಮಾಸ್ಕ್ ಹಾಕ್ಕೊಳ್ಳದೆ ಮೆಹಂದಿ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದು ಜನರ ಕೈಗೆ ಅಸ್ತ್ರ ಸಿಕ್ಕಂತಾಗಿದೆ.
Social media is abuzz with the citizens of the district expressing rage against deputy commissioner (DC) G Jagadeesha reportedly not wearing a mask while attending the Mehendi program of the daughter of additional SP on the evening of Friday, April 23.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm