ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.

ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.


ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.



ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm