ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.
ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.
ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.
ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm