ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.

ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.


ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.



ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm