ಬ್ರೇಕಿಂಗ್ ನ್ಯೂಸ್
24-04-21 03:38 pm Mangalore Correspondent ಕರಾವಳಿ
ಮಂಗಳೂರು, ಎ.24: ಮಂಗಳೂರು ಹೊರವಲಯದ ಬಜ್ಪೆ ಬಳಿಯ ಎಸ್ಇಝೆಡ್ ಏರಿಯಾದಲ್ಲಿ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ ಹತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಪರಿಸರದಲ್ಲಿ ಭೀತಿ ಸೃಷ್ಟಿಯಾಗಿದೆ.

ಮುಂಬೈ ಮೂಲದ ಕ್ಯಾಟಸಿಂಥ್ ಸ್ಪೆಷಾಲಿಟಿ ಕೆಮಿಕಲ್ಸ್ ಎನ್ನುವ ಹೆಸರಿನ ಪರ್ಫ್ಯೂಮ್ ಉತ್ಪಾದಿಸುವ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನ 2.30 ರ ಸುಮಾರಿಗೆ ಘಟನೆ ನಡೆದಿದ್ದು ಒಮ್ಮೆಲೇ ಬೆಂಕಿಯ ಜ್ವಾಲೆಗೆ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿದೆ. ದೂರದಿಂದಲೇ ಕಪ್ಪು ಹೊಗೆ ಏಳುತ್ತಿರುವುದು ಕಂಡುಬಂದಿದ್ದು ಕೆಲವೇ ಕ್ಷಣದಲ್ಲಿ ವಿಡಿಯೋ ವೈರಲ್ ಆಗಿದೆ.


ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿದೆ ಎನ್ನಲಾಗುತ್ತಿದ್ದು ಅಗ್ನಿಶಾಮಕ ಸಿಬಂದಿ ಬೆಂಕಿ ಶಮನದ ಕಾರ್ಯಾಚರಣೆ ಆರಂಭಿಸಿದ್ದಾರೆ. ವಾರಾಂತ್ಯದ ಲಾಕ್ಡೌನ್ ಆಗಿದ್ದರಿಂದ ಫ್ಯಾಕ್ಟರಿ ಬಂದ್ ಆಗಿತ್ತು. ಕಾರ್ಮಿಕರು ಕೂಡ ಹೆಚ್ಚಿರಲಿಲ್ಲ. ಕೆಲವು ಮಂದಿ ಮಾತ್ರ ಇದ್ದರು. ಸದ್ಯಕ್ಕೆ ಪ್ರಾಣಾಪಾಯದ ಬಗ್ಗೆ ಮಾಹಿತಿ ಇಲ್ಲ ಎಂದು ಎಸ್ಇಝೆಡ್ ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ.



ಪೆಟ್ರೋಲಿಯಂ ಉತ್ಪನ್ನಗಳಿಂದ ಪರ್ಫ್ಯೂಮ್ ಇನ್ನಿತರ ಉಪ ಉತ್ಪನ್ನಗಳ ತಯಾರಿಕೆ ನಡೆದಿತ್ತು. ಈ ಕಂಪನಿ ನಿರ್ಮಾಣಗೊಂದು ಮೂರು ವರ್ಷ ಆಗಿದ್ದು ಕಳೆದ ಒಂದು ವರ್ಷದಿಂದ ಉತ್ಪಾದನೆ ಕಾರ್ಯ ನಡೆಯುತ್ತಿತ್ತು. ಮುಂಬೈ ಮೂಲದ ಕಾರ್ಮುಕರೇ ಹೆಚ್ಚಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ.
ರಫ್ತು ಉದ್ದೇಶಿತ ಕಂಪನಿಯಾಗಿದ್ದು 10ರಿಂದ 15 ಎಕ್ರೆ ವ್ಯಾಪ್ತಿಯಲ್ಲಿ ಫ್ಯಾಕ್ಟರಿಯಿದ್ದು ಹೇಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನುವುದರ ಖಚಿತ ಮಾಹಿತಿಯಿಲ್ಲ. ಇದರ ಬೆಂಕಿ ಅಲ್ಲಿರುವ ಇತರ ಏಳೆಂಟು ಇದೇ ಮಾದರಿಯ ಕೆಮಿಕಲ್ ಫ್ಯಾಕ್ಟರಿಗಳಿಗೆ ಹರಡಿಕೊಳ್ಳುವ ಸಾಧ್ಯತೆ ಇದೆಯಾ ಎನ್ನುವ ಭಯ ಪರಿಸರದಲ್ಲಿ ಮೂಡಿದೆ.
Mangalore Sez Massive fire breaks out in perfume factory Catasynth Speciality Chemicals. The fire service team has reached the spot. No casualties reported
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm