ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.
ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm