ಬ್ರೇಕಿಂಗ್ ನ್ಯೂಸ್
25-04-21 09:44 pm Mangaluru correspondent ಕರಾವಳಿ
ಮಂಗಳೂರು, ಎ.25: ವೀಕೆಂಡ್ ಕರ್ಫ್ಯೂ ನಡುವೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು 47 ಜೋಡಿಗಳು ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿವೆ.
ಕಟೀಲು ದೇಗುಲದಲ್ಲಿ ಮದುವೆಯಾಗಲು 88 ಮಂದಿ ನೋಂದಣಿ ಮಾಡಿದ್ದರು. ಆದರೆ ವೀಕೆಂಡ್ ಲಾಕ್ಡೌನ್ ಕಾರಣದಿಂದ 47 ಜೋಡಿಗಳು ಮಾತ್ರ ವಿವಾಹವಾಗಿದ್ದಾರೆ.

ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ದೇವಳದ ಆಡಳಿತ ಮಂಡಳಿಯವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಮದುವೆಯಲ್ಲಿ ಭಾಗವಹಿಸಲು ವಧೂವರರ ಕಡೆಯಿಂದ ಒಟ್ಟು 10 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರಂತೆ ಇಂದು ಕೋವಿಡ್ ನಿಯಮದ ರೀತಿ ವಿವಾಹ ಕಾರ್ಯ ನಡೆದಿದ್ದು ಜನಸಂದಣಿಯನ್ನು ನಿಭಾಯಿಸಲು ದೇವಳದ ಸರಸ್ವತೀ ಸದನ, ಮಹಾಲಕ್ಷೀ ಸದನ ಮತ್ತು ಅನ್ನಛತ್ರದಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.


ದೇವರ ದರ್ಶನಕ್ಕಾಗಿ ದೇಗುಲದ ಪ್ರವೇಶ ನಿಷೇಧಿಸಲಾಗಿತ್ತು. ಹೊರ ಭಾಗದಿಂದಲೇ ನವ ಜೋಡಿಗಳು ದೇವರಿಗೆ ನಮಸ್ಕರಿಸಲು ಅವಕಾಶ ಕಲ್ಪಿಸಲಾಗಿತ್ತು. ಕಟೀಲು ದೇವಳದಲ್ಲಿ ಸಾಮಾನ್ಯವಾಗಿ ಮದುವೆಯ ಧಾರೆ ನಡೆದು, ಹೊರಗಡೆಯ ಹಾಲ್ ನಲ್ಲಿ ರಿಸೆಪ್ಷನ್ ನಡೆಸುತ್ತಿದ್ದರು. ಆದರೆ, ಈ ಬಾರಿ ಹಾಲ್ ಗಳಲ್ಲಿ ಮದುವೆ ನಡೆಯುವುದಿದ್ದರೂ 50 ಮಂದಿಗಷ್ಟೇ ಅವಕಾಶ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಜೋಡಿಗಳು ಕಟೀಲಿನಲ್ಲೇ ಮದುವೆಯಾಗಿ ಅಲ್ಲಿಯೇ ಎಲ್ಲವನ್ನೂ ಮುಗಿಸಿದ್ದಾರೆ. ಕೆಲವರು ಮದುವೆಯ ಧಾರೆ ನಡೆದ ಬಳಿಕ ಮನೆಗೆ ತೆರಳಿ, ಮದುವೆ ಸಂಭ್ರಮ ಮಾಡಿದ್ದಾರೆ. ಕೆಲವರು ಮದುವೆಯನ್ನೇ ರದ್ದು ಪಡಿಸಿ ಮುಂದೂಡಿಕೆ ಮಾಡಿದ್ದರು.

ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಅತಿ ಹೆಚ್ಚು ಮಂದಿ ಎ.25 ಮತ್ತು 26 ರಂದು ಮದುವೆಗೆ ದಿನ ನಿಗದಿ ಮಾಡಿಕೊಂಡಿದ್ದರು. ಆದರೆ, ಈ ಬಾರಿ ಕೊರೊನಾ ಲಾಕ್ಡೌನ್ ಮದುವೆ ಸಂಭ್ರಮಕ್ಕೆ ಎಳ್ಳು ನೀರು ಬಿಟ್ಟಿದೆ.
Covid Weekend Curfew in Karnataka Mangalore administration curtails 44 Marriages that was in Kateel temple today to 10.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm