ಬ್ರೇಕಿಂಗ್ ನ್ಯೂಸ್
26-04-21 05:21 pm Udupi Correspondent ಕರಾವಳಿ
ಉಡುಪಿ, ಏ.26 : ದೇಶದಲ್ಲಿ ಕೊರೊ ಕಾರಣದಿಂದ ಆಕ್ಸಿಜನ್ ಕೊರತೆ ಕಾಣಿಸಿಕೊಂಡ ಬೆನ್ನಲ್ಲೇ ಸರಕಾರ ಎಚ್ಚತ್ತುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಥಮ ಆಕ್ಸಿಜನ್ ರಿಫಿಲ್ಲಿಂಗ್ ಘಟಕ ಕಾಪು ತಾಲೂಕಿನ ಬೆಳಪುವಿನಲ್ಲಿ ಆರಂಭಗೊಂಡಿದೆ.
ಮಂಗಳೂರಿನ ಬೈಕಂಪಾಡಿ ಮತ್ತು ಕಾರ್ನಾಡ್ ಕೈಗಾರಿಕಾ ವಲಯದಲ್ಲಿರುವ ಮೂರು ಆಕ್ಸಿಜನ್ ಘಟಕಗಳಿಂದ ಸದ್ಯ ಉಡುಪಿ ಜಿಲ್ಲೆಯ ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಆಕ್ಸಿಜನ್ ಪೂರೈಸಲಾಗುತ್ತಿದೆ. ಆದರೆ ಈಗ ಬೆಳಪುವಿನಲ್ಲಿ ಆಕ್ಸಿಜನ್ ರಿಫಿಲ್ಲಿಂಗ್ ಸ್ಥಾವರ ಸ್ಥಾಪನೆಯಾಗಿದ್ದು ಜಿಲ್ಲೆಯಲ್ಲೇ ರೀ ಫಿಲ್ಲಿಂಗ್ ಸಾಧ್ಯವಾಗಲಿದೆ.
ಬೆಳಪು ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎನ್. ಕ್ರೈಯೋಜನಿಕ್ಸ್ ಪ್ರೈ. ಲಿ. ಸಂಸ್ಥೆಯು ಕೈಗಾರಿಕೆಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಸರಬರಾಜು ಮಾಡುವ ನಿಟ್ಟಿನಲ್ಲಿ ಸ್ಥಾಪಿಸಿದೆ. ಇಲ್ಲಿಗೆ ಬೇಕಾಗುವ ಲಿಕ್ವಿಡ್ ಆಕ್ಸಿಜನ್ ಅನ್ನು ಬೆಂಗಳೂರು ಮತ್ತು ಬಳ್ಳಾರಿ ಸಮೀಪದ ತೋರಂಗಲ್ನಿಂದ ತರಿಸಿಕೊಳ್ಳಲಾಗುತ್ತದೆ. ಒಮ್ಮೆಗೆ 20 ಸಾವಿರ ಕ್ಯೂಬಿಕ್ ಮೀ. ಲಿಕ್ವಿಡ್ ಆಕ್ಸಿಜನ್ ತರಿಸಿ ದಾಸ್ತಾನು ಮಾಡಿ ಆನಂತರ ಗ್ಯಾಸ್ ಆಗಿ ಸಂಸ್ಕರಿಸಿ ಸಿಲಿಂಡರ್ಗಳಿಗೆ ತುಂಬಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ನಟರಾಜ್, ಸ್ಥಾವರ ಸ್ಥಾಪನೆಯಿಂದಾಗಿ ಜಿಲ್ಲೆಯ ಆಸ್ಪತ್ರೆಗಳಿಗೆ ಕಡಿಮೆ ಅವಧಿಯಲ್ಲಿ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತದೆ. ಜಿಲ್ಲೆಯ ಉಡುಪಿ, ಮಣಿಪಾಲ, ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಸರಕಾರಿ ಮತ್ತು ಖಾಸಗಿ ವಲಯದ 40ಕ್ಕೂ ಅಧಿಕ ಆಸ್ಪತ್ರೆಗಳಿಗೆ ಆಕ್ಸಿಜನ್ ಸರಬರಾಜು ಮಾಡಲು ಸುಲಭ ಎಂದು ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಬೆಳಪುವಿನ ಈ ಘಟಕದಿಂದಾಗಿ ಜಿಲ್ಲೆಯ ಮೆಡಿಕಲ್ ಎಮರ್ಜೆನ್ಸಿಗೆ ಸಹಾಯವಾಗಲಿದೆ. ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
The government now opens an oxygen refilling center in Kapu, Udupi.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm