ಬ್ರೇಕಿಂಗ್ ನ್ಯೂಸ್
26-04-21 05:21 pm Udupi Correspondent ಕರಾವಳಿ
ಉಡುಪಿ, ಏ.26 : ದೇಶದಲ್ಲಿ ಕೊರೊ ಕಾರಣದಿಂದ ಆಕ್ಸಿಜನ್ ಕೊರತೆ ಕಾಣಿಸಿಕೊಂಡ ಬೆನ್ನಲ್ಲೇ ಸರಕಾರ ಎಚ್ಚತ್ತುಕೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಥಮ ಆಕ್ಸಿಜನ್ ರಿಫಿಲ್ಲಿಂಗ್ ಘಟಕ ಕಾಪು ತಾಲೂಕಿನ ಬೆಳಪುವಿನಲ್ಲಿ ಆರಂಭಗೊಂಡಿದೆ.
ಮಂಗಳೂರಿನ ಬೈಕಂಪಾಡಿ ಮತ್ತು ಕಾರ್ನಾಡ್ ಕೈಗಾರಿಕಾ ವಲಯದಲ್ಲಿರುವ ಮೂರು ಆಕ್ಸಿಜನ್ ಘಟಕಗಳಿಂದ ಸದ್ಯ ಉಡುಪಿ ಜಿಲ್ಲೆಯ ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಆಕ್ಸಿಜನ್ ಪೂರೈಸಲಾಗುತ್ತಿದೆ. ಆದರೆ ಈಗ ಬೆಳಪುವಿನಲ್ಲಿ ಆಕ್ಸಿಜನ್ ರಿಫಿಲ್ಲಿಂಗ್ ಸ್ಥಾವರ ಸ್ಥಾಪನೆಯಾಗಿದ್ದು ಜಿಲ್ಲೆಯಲ್ಲೇ ರೀ ಫಿಲ್ಲಿಂಗ್ ಸಾಧ್ಯವಾಗಲಿದೆ.
ಬೆಳಪು ಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಎಸ್.ಎನ್. ಕ್ರೈಯೋಜನಿಕ್ಸ್ ಪ್ರೈ. ಲಿ. ಸಂಸ್ಥೆಯು ಕೈಗಾರಿಕೆಗೆ ಮತ್ತು ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಸರಬರಾಜು ಮಾಡುವ ನಿಟ್ಟಿನಲ್ಲಿ ಸ್ಥಾಪಿಸಿದೆ. ಇಲ್ಲಿಗೆ ಬೇಕಾಗುವ ಲಿಕ್ವಿಡ್ ಆಕ್ಸಿಜನ್ ಅನ್ನು ಬೆಂಗಳೂರು ಮತ್ತು ಬಳ್ಳಾರಿ ಸಮೀಪದ ತೋರಂಗಲ್ನಿಂದ ತರಿಸಿಕೊಳ್ಳಲಾಗುತ್ತದೆ. ಒಮ್ಮೆಗೆ 20 ಸಾವಿರ ಕ್ಯೂಬಿಕ್ ಮೀ. ಲಿಕ್ವಿಡ್ ಆಕ್ಸಿಜನ್ ತರಿಸಿ ದಾಸ್ತಾನು ಮಾಡಿ ಆನಂತರ ಗ್ಯಾಸ್ ಆಗಿ ಸಂಸ್ಕರಿಸಿ ಸಿಲಿಂಡರ್ಗಳಿಗೆ ತುಂಬಲಾಗುತ್ತದೆ.
ಈ ಬಗ್ಗೆ ಮಾಹಿತಿ ನೀಡಿದ ಸಂಸ್ಥೆಯ ಮುಖ್ಯಸ್ಥ ನಟರಾಜ್, ಸ್ಥಾವರ ಸ್ಥಾಪನೆಯಿಂದಾಗಿ ಜಿಲ್ಲೆಯ ಆಸ್ಪತ್ರೆಗಳಿಗೆ ಕಡಿಮೆ ಅವಧಿಯಲ್ಲಿ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತದೆ. ಜಿಲ್ಲೆಯ ಉಡುಪಿ, ಮಣಿಪಾಲ, ಕುಂದಾಪುರ, ಬ್ರಹ್ಮಾವರ, ಕಾರ್ಕಳ ಸೇರಿದಂತೆ ಸರಕಾರಿ ಮತ್ತು ಖಾಸಗಿ ವಲಯದ 40ಕ್ಕೂ ಅಧಿಕ ಆಸ್ಪತ್ರೆಗಳಿಗೆ ಆಕ್ಸಿಜನ್ ಸರಬರಾಜು ಮಾಡಲು ಸುಲಭ ಎಂದು ತಿಳಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾತನಾಡಿ, ಬೆಳಪುವಿನ ಈ ಘಟಕದಿಂದಾಗಿ ಜಿಲ್ಲೆಯ ಮೆಡಿಕಲ್ ಎಮರ್ಜೆನ್ಸಿಗೆ ಸಹಾಯವಾಗಲಿದೆ. ಶೀಘ್ರದಲ್ಲೇ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
The government now opens an oxygen refilling center in Kapu, Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm