ಬ್ರೇಕಿಂಗ್ ನ್ಯೂಸ್
26-04-21 05:30 pm Mangalore Correspondent ಕರಾವಳಿ
ಮಂಗಳೂರು, ಎ.26: ಗರ್ಭಿಣಿ ಮಹಿಳೆಯನ್ನು ನಡುರಾತ್ರಿಯಲ್ಲಿ ಕಾರಿನಲ್ಲಿ ಕರೆತರುತ್ತಿದ್ದಾಗ ಕಾರು ಕೆಟ್ಟು ಹೋಗಿತ್ತು. ಇನ್ನೇನು ಮಾಡುವುದೆಂದು ಆಕೆಯ ಗಂಡ ಯೋಚನೆ ಮಾಡುತ್ತಿದ್ದಾಗ, ಅಲ್ಲಿದ್ದ ಪೊಲೀಸರು ಸಹಾಯಕ್ಕೆ ಬಂದಿದ್ದಾರೆ. ಮಾನವೀಯ ಕಾರ್ಯ ಮಾಡಿದ ಕಂಕನಾಡಿ ಗ್ರಾಮಾಂತರ ಠಾಣೆಯ ಎಎಸ್ಐ ಹರೀಶ್ ಕೆ. ಮತ್ತು ಕಾನ್ ಸ್ಟೇಬಲ್ ವಿಜಯ್ ಕುಮಾರ್ ಅವರನ್ನು ಪೊಲೀಸ್ ಕಮಿಷನರ್ ಸನ್ಮಾನಿಸಿದ್ದಾರೆ.


ಗುರುವಾಯನಕೆರೆಯ ಶಾಹಿದಾ (29) ಎಂಬ ಮಹಿಳೆಗೆ ಎ.23ರಂದು ರಾತ್ರಿ ಹೆರಿಗೆ ನೋವು ಕಾಣಿಸಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಗಂಡ ಸಿದ್ದಿಕ್ ತನ್ನ ಆಲ್ಟೋ ಕಾರಿನಲ್ಲಿ ಮಂಗಳೂರಿಗೆ ಕರೆತರುತ್ತದ್ದರು. ಫರಂಗಿಪೇಟೆ ಬಳಿಯ ಅರ್ಕುಳಕ್ಕೆ ತಲುಪಿದಾಗ ನಡುರಾತ್ರಿ 1.30 ಗಂಟೆ ಆಗಿತ್ತು. ಕಾರು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ದಿಕ್ಕು ತೋಚದಾಗಿತ್ತು. ಈ ವೇಳೆ, ಅಲ್ಲಿಯೇ ಸ್ವಲ್ಪ ದೂರದಲ್ಲಿ ಚೆಕ್ ಪೋಸ್ಟ್ ಹಾಕಿದ್ದ ಪೊಲೀಸರ ಬಳಿಗೆ ಸಿದ್ದಿಕ್ ತೆರಳಿದ್ದಾರೆ. ಕಾರು ಕೆಟ್ಟು ಹೋಗಿರುವ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದು, ಕೂಡಲೇ ಅಲ್ಲಿದ್ದ ಪೊಲೀಸರು ನೆರವಿಗೆ ಬಂದಿದ್ದಾರೆ.


ಕಂಕನಾಡಿ ಗ್ರಾಮಾಂತರ ಠಾಣೆಯ ಎಎಸ್ಐ ಹರೀಶ್ ತಮ್ಮದೇ ಇಲಾಖೆಯ ಜೀಪಿನಲ್ಲಿ ಗರ್ಭಿಣಿಯನ್ನು ಕುಳ್ಳಿರಿಸಿ, ಮಂಗಳೂರಿನ ಎಜೆ ಆಸ್ಪತ್ರೆಗೆ ತಲುಪಿಸಿದ್ದಾರೆ. ಶಾಹಿದಾ ಬಾನು ಮರುದಿನ ಬೆಳಗ್ಗೆ ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ವಿಷಯ ತಿಳಿದ ಕಮಿಷನರ್ ಶಶಿಕುಮಾರ್, ಇಬ್ಬರು ಸಿಬಂದಿಯನ್ನೂ ಕಚೇರಿಗೆ ಕರೆಸಿ ಸನ್ಮಾನಿಸಿದ್ದಾರೆ. ಸೂಕ್ತ ಸಮಯಕ್ಕೆ ನೆರವಿಗೆ ಬಂದ ಸಿಬಂದಿಯನ್ನು ಅಭಿನಂದಿಸುತ್ತೇನೆ. ಮಹಿಳೆಯ ಬಗ್ಗೆ ಸಿಬಂದಿ ಸಕಾಲದಲ್ಲಿ ನೆರವಿಗೆ ಬರದಿರುತ್ತಿದ್ದರೆ, ತಾಯಿ ಮತ್ತು ಮಗುವಿಗೆ ಅಪಾಯ ಬರುವ ಸಾಧ್ಯತೆಯಿತ್ತು. ಕೆಲವರು ಆಂಬುಲೆನ್ಸ್ ಕರೆಸಿ, ಕಳಿಸಿಕೊಡುವ ವ್ಯವಸ್ಥೆ ಮಾಡುತ್ತಾರೆ. ಆದರೆ, ಇವರು ತಮ್ಮದೇ ವಾಹನದಲ್ಲಿ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ ಎಂದು ಕಮಿಷನರ್ ಇಬ್ಬರು ಸಿಬಂದಿಯ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.


ರಾತ್ರಿ ವೇಳೆ ಕರ್ಫ್ಯೂ ಇರುವುದರಿಂದ ಪೊಲೀಸರು ಹೆದ್ದಾರಿಯ ಅಲ್ಲಲ್ಲಿ ಗಸ್ತು ನಿರತರಾಗಿದ್ದಾರೆ. ಚೆಕ್ ಪೋಸ್ಟ್ ಹಾಕಿ, ವಿನಾಕಾರಣ ವಾಹನ ಚಲಾಯಿಸುವ ಮಂದಿಯನ್ನು ನಿಯಂತ್ರಿಸುತ್ತಿದ್ದಾರೆ. ಇದರ ಮಧ್ಯೆಯೇ ಇಬ್ಬರು ಪೊಲೀಸ್ ಸಿಬಂದಿ ಮಾನವೀಯ ಕಾರ್ಯ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಕಾರಣವಾಗಿದೆ.
Two police personnel of Kankandy Rural police station were felicitated by Mangalore Police Commissioner for helping in shifting a pregnant woman undergoing labour pain to the hospital in the police car. The police personnel are Mangaluru rural police station assistant sub-inspector Harish K and constable Vijay Kumar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm