ಬ್ರೇಕಿಂಗ್ ನ್ಯೂಸ್
26-04-21 05:56 pm Mangalore Correspondent ಕರಾವಳಿ
ಮಂಗಳೂರು, .26: ಜೈಲಿನಲ್ಲಿ ಕೈದಿಗಳ ನಡುವಿನ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಆರೋಪಿ ಕೈದಿಯ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದೆ. ವಿಚಾರಣಾಧೀನ ಕೈದಿಗಳಿಗೆ ಹಲ್ಲೆ, ಜೈಲು ಸಿಬಂದಿಗೆ ಹಲ್ಲೆ ನಡೆಸಿದ್ದು ಮತ್ತು ವಿಚಾರಣೆಗೆ ಬಂದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನಿಸಿದ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.



ಆರೋಪಿ ಸಮೀರ್ ಎನ್ನುವ ಕೈದಿ ಕ್ಯಾರಂ ಬೋರ್ಡ್ ಫ್ರೇಮ್, ಟ್ಯೂಬ್ ಲೈಟ್, ಚಮಚ ಮತ್ತಿತರ ಸಾಮಗ್ರಿಗಳನ್ನು ಉಪಯೋಗಿಸಿ ಹಲ್ಲೆ ಕೃತ್ಯ ನಡೆಸಿದ್ದಾನೆ ಎನ್ನಲಾಗುತ್ತಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ವೇಳೆ, ಪೊಲೀಸ್ ಕಮಿಷನರ್ ಶಶಿಕುಮಾರ್, ಆರೋಪಿ ಕೈದಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.


ಇದಲ್ಲದೆ, ಮಂಗಳೂರಿನ ಜೈಲಿನಿಂದ 20 ಮಂದಿ ಕೈದಿಗಳನ್ನು ಬೆಳಗಾವಿ, ಶಿವಮೊಗ್ಗ ಮತ್ತು ಧಾರವಾಡ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಮಧ್ಯದಲ್ಲೇ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಸಮೀರ್, ಮೂಲ್ಕಿ ಮತ್ತು ಮೂಡುಬಿದ್ರೆಯ ಅನ್ಸಾರ್ ಹಾಗೂ ಜೈನುದ್ದೀನ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ, ಕೈದಿಗಳ ರಕ್ಷಣೆಗೆ ಮುಂದಾಗಿದ್ದ ಜೈಲು ಸಿಬಂದಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಭಾನುವಾರ ಬೆಳಗ್ಗೆ ಕೊಡಿಯಾಲಬೈಲಿನ ಜೈಲಿನಲ್ಲಿ ಘಟನೆ ನಡೆದಿತ್ತು.
Read: ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ ; ದರೋಡೆ ಪ್ರಕರಣದ ಆರೋಪಿಗಳ ಹೊಡೆದಾಟ
Four cases have been filed against Sammer for attacking inmates in Mangalore Jail and also attack police personnel said Police Commissioner Shashi Kumar.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm