ಬ್ರೇಕಿಂಗ್ ನ್ಯೂಸ್
28-04-21 04:00 pm Mangalore Correspondent ಕರಾವಳಿ
ಮಂಗಳೂರು, ಎ.28: ಲಾಕ್ಡೌನ್ ಆಗಿ ಎಲ್ಲ ಕಡೆಯೂ ಬಂದ್ ಆಗಿದೆ, ಜನ, ವಾಹನಗಳಿಲ್ಲದೆ ರಸ್ತೆಗಳೆಲ್ಲ ಬಿಕೋ ಎನ್ನುತ್ತಿವೆ. ರೈಲು ನಿಲ್ದಾಣದತ್ತ ಹೋದರೆ ಮಾತ್ರ ನೂರಾರು ಕಾರ್ಮಿಕರು ದಿಕ್ಕೆಟ್ಟು ನಿಂತಿದ್ದಾರೆ. ಎರಡು ದಿನಗಳಿಂದ ಊಟ, ನೀರು ಸಿಗದೆ, ಪರಿತಪಿಸುತ್ತಿದ್ದವರೂ ಅಲ್ಲಿದ್ದರು. ಮೈಬಗ್ಗಿಸಿ ದುಡಿಯುವ ಕಾರ್ಮಿಕರಾಗಿದ್ದರಿಂದ ಎರಡು ದಿನವಾದ್ರೂ ಊಟ ಇಲ್ಲದೆ ಅಲ್ಪ ಸ್ವಲ್ಪ ನೀರು, ಚಹಾ ಸೇವಿಸಿಕೊಂಡು ಕಾಲ ಕಳೆದವರಿದ್ದರು.

ಹೆಡ್ ಲೈನ್ ಕರ್ನಾಟಕದ ಪ್ರತಿನಿಧಿ ರೈಲು ನಿಲ್ದಾಣಕ್ಕೆ ತೆರಳಿ ಅವರನ್ನು ಮಾತನಾಡಿಸಿದಾಗ, ಅಲ್ಲಿನ ವಾಸ್ತವ ತಿಳಿದುಬಂತು. ಹರೆಯದ ಯುವಕರು ಅನ್ನ, ನೀರಿಲ್ಲದೆ ಇತ್ತ ಅಧಿಕಾರಿಗಳ ಸಹಾಯವೂ ಸಿಗದೆ ಕಂಗಾಲಾಗಿ ಕುಳಿತಿದ್ದರು. ಕೂಡಲೇ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್ ಅವರ ಗಮನಕ್ಕೆ ತರಲಾಯ್ತು. ಕಾಮತರು, ಅಲ್ಲಿ ಎಷ್ಟು ಜನ ಇದ್ದಾರೆಂದು ವಿಚಾರಿಸಿ ಕೂಡಲೇ ಊಟ ಕಳಿಸಿಕೊಡುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.


ಸ್ವಲ್ಪ ಹೊತ್ತಿನಲ್ಲಿ ಮಂಗಳೂರಿನ ಸೇವಾಂಜಲಿ ಟ್ರಸ್ಟ್ ಸದಸ್ಯರು ಟೆಂಪೋದಲ್ಲಿ ಊಟ ಮತ್ತು ನೀರನ್ನು ಹೊತ್ತುಕೊಂಡು ಬಂದರು. ಹಸಿದು ಬಳಲಿದ್ದ 260 ಮಂದಿಯ ಉದರ ತಣಿಸುವ ಕೆಲಸ ಮಾಡಿದರು. ಸೋಮವಾರ ರಾತ್ರಿಯ ರೈಲಿಗೆಂದು ಬಂದು ಅದರಲ್ಲಿ ಹೋಗಲಾಗದೆ ಉಳಿದುಕೊಂಡಿದ್ದ ಬಹಳಷ್ಟು ಮಂದಿ ಎರಡು ದಿನದ ನಂತರ ಊಟ ಮಾಡಿದ್ರು. ಇದರ ನಡುವೆ, ರೈಲಿನ ಚಹಾವಾಲಾಗಳು ಅಲ್ಪ ಸ್ವಲ್ಪ ಚಹ ಮತ್ತು ಬ್ರೆಡ್ ಕೊಟ್ಟಿದ್ದರಂತೆ.




ಇದೇ ವೇಳೆ ಮಾತನಾಡಿದ ಸೇವಾಂಜಲಿ ಟ್ರಸ್ಟಿನ ನರೇಶ್ ಪ್ರಭು, ಹೆಡ್ ಲೈನ್ ಕರ್ನಾಟಕಕ್ಕೆ ಅಭಿನಂದನೆ ಹೇಳುತ್ತೇವೆ, ಇಲ್ಲಿ ಹಸಿದು ಬಳಲಿದ್ದ ಕಾರ್ಮಿಕರ ಬಗ್ಗೆ ಶಾಸಕರ ಗಮನಕ್ಕೆ ತಂದಿದ್ದಾರೆ. ಶಾಸಕರ ನೇತೃತ್ವದಲ್ಲಿ ನಡೆಯುವ ಸೇವಾಂಜಲಿ ಟ್ರಸ್ಟ್ ನಿಂದ ವಿವಿಧ ಕಡೆಗಳಿಗೆ ಊಟದ ವ್ಯವಸ್ಥೆ ಮಾಡಿದ್ದೇವೆ. ಪೊಲೀಸರಿಗೆ, ರಸ್ತೆ ಬದಿ ಇರುವ ಅನಾಥರಿಗೆ ಊಟ ತಲುಪಿಸುವ ಕೆಲಸ ಮಾಡುತ್ತೇವೆ. ಈಗ ಕಾರ್ಮಿಕರ ಹೊಟ್ಟೆ ತಣಿಸುವ ಕೆಲಸಕ್ಕೆ ಹೆಡ್ ಲೈನ್ ಕರ್ನಾಟಕ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.



ಇದೇ ವೇಳೆ, ಹಸಿದು ಬಳಲಿದ್ದ ಕಾರ್ಮಿಕರು ಕೂಡ ಥ್ಯಾಂಕ್ಸ್ ಹೇಳಿದರು. ನಮ್ಮ ಸ್ಥಿತಿ ಕಂಡು ಊಟ ತರಿಸಿಕೊಡುವ ವ್ಯವಸ್ಥೆ ಮಾಡಿದ್ರಿ. ನಾವು ಆಭಾರಿಯಾಗಿದ್ದೇವೆ ಎಂದು ಒಬ್ಬ ಕಾರ್ಮಿಕ ಹೇಳಿಕೆ ನೀಡಿದ್ದು ಲಾಕ್ಡೌನ್ ಸ್ಥಿತಿಯನ್ನು ಕಣ್ಣಿಗೆ ಕಟ್ಟಿಕೊಟ್ಟಿತ್ತು.
ಲಾಕ್ಡೌನ್ ; ರೈಲು ನಿಲ್ದಾಣದಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವ ಉತ್ತರ ಭಾರತದ ಕಾರ್ಮಿಕರು !
Video:
MLA Vedavyas Kamath's Sevanjali trust helped hundreds of Stranded Migrants who were without food for three days by giving them a good tasty meal after the reporter of Headline Karnataka sought for help from MLA. The migrants thanked MLA for his great help in times of distress.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm