ಬ್ರೇಕಿಂಗ್ ನ್ಯೂಸ್
28-04-21 08:34 pm Mangaluru correspondent ಕರಾವಳಿ
ಉಳ್ಳಾಲ, ಎ.28: ಸ್ನೇಹಿತರೊಂದಿಗೆ ನೇತ್ರಾವತಿ ರೈಲ್ವೇ ಸೇತುವೆ ಬಳಿ ವಿಹಾರಕ್ಕೆ ತೆರಳಿದ್ದ ಯುವಕ ಸೋಮವಾರ ಸಂಜೆ ದಿಢೀರ್ ನಾಪತ್ತೆಯಾಗಿದ್ದು ಆತನ ಮೃತದೇಹ ಬುಧವಾರ ಸಂಜೆ ನೇತ್ರಾವತಿ ತೀರದಲ್ಲಿ ಪತ್ತೆಯಾಗಿದೆ.
ಉಳ್ಳಾಲಬೈಲ್ ನಿವಾಸಿ ನಿತಿನ್(32) ಮೃತ ಯುವಕ. ನಿತಿನ್ ಸೋಮವಾರ ಮಧ್ಯಾಹ್ನ ತನ್ನಿಬ್ಬರು ಸ್ನೇಹಿತರ ಜೊತೆಗೆ ಸೋಮೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದ್ದು, ನಂತರ ಸಂಜೆ ಹೊತ್ತಿಗೆ ಮೂವರು ನೇತ್ರಾವತಿ ರೈಲ್ವೇ ಸೇತುವೆ ಬಳಿಗೆ ತೆರಳಿದ್ದರು. ಈ ಪೈಕಿ ನಿತಿನ್ ಮಾತ್ರ ನಾಪತ್ತೆಯಾಗಿದ್ದ. ಈ ಬಗ್ಗೆ ನಿತಿನ್ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದು ಪೊಲೀಸರು ನಿತಿನ್ ಜೊತೆಗಿದ್ದ ಇಬ್ಬರು ಸ್ನೇಹಿತರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸರ ವಶದಲ್ಲಿರುವ ಇಬ್ಬರು ಸ್ನೇಹಿತರು ನಿತಿನ್ ರೈಲ್ವೇ ಸೇತುವೆಯಲ್ಲಿ ಟ್ರ್ಯಾಕ್ ಮೇಲೆ ಮಲಗಿದ್ದು ರೈಲು ಬಂದಾಗ ತಪ್ಪಿಸುವ ಯತ್ನದಲ್ಲಿ ನದಿಗೆ ಹಾರಿದ್ದಾಗಿ ಹೇಳಿದ್ದಾರಂತೆ. ಘಟನೆಯ ಸತ್ಯಾಸತ್ಯತೆ ಪೊಲೀಸರ ವಿಚಾರಣೆಯಲ್ಲಿ ತಿಳಿಯಬೇಕಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಆಡಂಕುದ್ರುವಿನಲ್ಲಿ ನಿತಿನ್ ಮೃತದೇಹ ಪತ್ತೆಯಾಗಿದ್ದು ದೇಹವು ಸಂಪೂರ್ಣ ಕೊಳೆತು ಹೋಗಿದೆ. ಕಂಕನಾಡಿ ಠಾಣೆ ಇನ್ಸ್ ಪೆಕ್ಟರ್ ಅಶೋಕ್ ಮತ್ತು ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ಸಮಕ್ಷಮದಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ನಿತಿನ್ ಅವಿವಾಹಿತರಾಗಿದ್ದು ಈ ಹಿಂದೆ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದು ಕೊರೊನಾ ಲಾಕ್ ಡೌನ್ ನಂತರ ಊರಿಗೆ ಮರಳಿದ್ದು ವೆಲ್ಡರ್ ವೃತ್ತಿ ನಡೆಸುತ್ತಿದ್ದರು. ಮೃತ ನಿತಿನ್ ಸಹೋದರ ಮತ್ತು ತಾಯಿಯನ್ನು ಅಗಲಿದ್ದಾರೆ.
ಉಳ್ಳಾಲ: ಸ್ನೇಹಿತರ ಜೊತೆಗಿದ್ದ ಯುವಕ ನೇತ್ರಾವತಿ ಸೇತುವೆಯಲ್ಲಿ ದಿಢೀರ್ ನಾಪತ್ತೆ
A 32 year old Man who was missing after he went with his friends to Netravathi Railway bridge his body has been found at river side. The deceased has been identified as Nithin (32). A missing case was filed at Ullal police station.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 12:10 pm
Mangalore Correspondent
Ullal Montepadavu Landslide, Rain, Flood: ಮೊಂ...
31-05-25 12:05 pm
Sudheer Kumar Reddy, Mangalore Police Commiss...
30-05-25 10:46 pm
Mangalore Rain, Ullal, Death: ಮಳೆ ಅವಾಂತರ ; ಉಳ...
30-05-25 10:20 pm
Mangalore, IPS Dr Arun, Dakshina Kannada SP:...
30-05-25 05:18 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm