ಬ್ರೇಕಿಂಗ್ ನ್ಯೂಸ್
01-05-21 08:24 pm Mangaluru Correspondent ಕರಾವಳಿ
ಮಂಗಳೂರು, ಮೇ 1: ನೇತ್ರಾವತಿ ನದಿಗೆ ಕಸ ಎಸೆದು ಸಿಕ್ಕಿಬಿದ್ದ ಕಾರು ಮತ್ತು ಮಹಿಳೆಯರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಬೆಳಗ್ಗೆ ಉಳ್ಳಾಲದ ನೇತ್ರಾವತಿ ನದಿಯ ಸೇತುವೆಯಲ್ಲಿ ಕಾರು ನಿಲ್ಲಿಸಿ, ಕಸದ ಪ್ಯಾಕೆಟನ್ನು ಮಹಿಳೆಯೊಬ್ಬರು ನದಿಗೆ ಎಸೆದಿದ್ದು ಅದನ್ನು ಹಿಂದಿನ ಕಾರಿನಲ್ಲಿದ್ದವರು ಮೊಬೈಲಿನಲ್ಲಿ ವಿಡಿಯೋ ಮಾಡಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ, ಮಹಾನಗರ ಪಾಲಿಕೆಯಿಂದ ಕ್ರಮ ಜರುಗಿಸಲಾಗಿದೆ.
ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು ನೀಡಿದ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.


ಕಾರಿನಲ್ಲಿದ್ದ ಮೈಸೂರು ಮೂಲದ ಶೈಲಜಾ ನಾಯಕ್, ರಚನಾ ನಾಯಕ್ ಮತ್ತು ಸುಶೀಲಾ ಎಂಬವರ ಮೇಲೆ ಕೇಸು ದಾಖಲಾಗಿದೆ. ಅಲ್ಲದೆ, ಕಾರಿನಲ್ಲಿದ್ದವರು ಮಾಸ್ಕ್ ಧರಿಸದೆ ಲಾಕ್ಡೌನ್ ನಿಯಮ ಉಲ್ಲಂಘಿಸಿದ್ದಾರೆಂದು ಪೊಲೀಸರು ಜಿಲ್ಲಾಧಿಕಾರಿಗೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರನ್ನು ಪತ್ತೆ ಮಾಡಿ ತ್ವರಿತ ಕ್ರಮ ಜರುಗಿಸಿದ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ರಂಜಿತ್ ಕುಮಾರ್ ಕಾರ್ಯ ನಿರ್ವಹಣೆಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ತಮ್ಮ ಟ್ವಿಟರ್ ನಲ್ಲಿ ಶ್ಲಾಘಿಸಿದ್ದಾರೆ.
ಪೊಲೀಸರು ತುರ್ತು ಕ್ರಮ ಕೈಗೊಂಡು ನದಿಯನ್ನು ಮಲಿನ ಮಾಡುವವರಿಗೆ ಬಿಸಿ ಮುಟ್ಟಿಸಿದ ರೀತಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
Read: ಮಂಗಳೂರು: ಧಮ್ ಲಗಾಕೆ ಐಸಾ... ನೇತ್ರಾವತಿ ಸೇತುವೆಯಲ್ಲಿ ಕಾರು ನಿಲ್ಲಿಸಿ ಹಾಕಿದ್ರೂ ಕಸ ! ವೀಡಿಯೋ ವೈರಲ್
Vehicle seized in kankanadi police station. Appreciate the prompt and quick action by Ranjith IPS Acp south and his team.. pic.twitter.com/6JbGT7WevT
— N. Shashi Kumar CP Mangaluru City (@compolmlr) May 1, 2021
South Acp Ranjith Kumar and team have took quick action in the incident where a woman was seen throwing garbage over the fence of Netravati bridge in Mangalore. A video of the incident had gone viral on social media on Saturday May 1.Kankanady police seized the car and filed a case responding to a complaint filed by senior health officer of Mangaluru City Corporation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm