ಬ್ರೇಕಿಂಗ್ ನ್ಯೂಸ್
04-05-21 11:19 am Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರಹ್ಮಾವರದ ಆವರ್ಸೆ ಪಡುಮನೆ ಮೂಲದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ.ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದರು.

ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAM ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು. ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು. ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.
Mangalore Senior Journalist Surendra Shetty passes away at 57. He was suffering from health issues and was admitted in the hospital.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm