ಬ್ರೇಕಿಂಗ್ ನ್ಯೂಸ್
04-05-21 11:19 am Mangalore Correspondent ಕರಾವಳಿ
ಮಂಗಳೂರು, ಮೇ 4 : ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬ್ರಹ್ಮಾವರದ ಆವರ್ಸೆ ಪಡುಮನೆ ಮೂಲದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ.ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದರು.

ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAM ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು. ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು. ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.
Mangalore Senior Journalist Surendra Shetty passes away at 57. He was suffering from health issues and was admitted in the hospital.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm