ಬ್ರೇಕಿಂಗ್ ನ್ಯೂಸ್
04-05-21 12:46 pm Mangalore Correspondent ಕರಾವಳಿ
ಮಂಗಳೂರು, ಮೇ 4 : ನಗರದ ಮೀನುಗಾರಿಕೆ ಬಂದರು ದಕ್ಕೆಯಲ್ಲಿ ಸಾರ್ವಜನಿಕರು ನೇರವಾಗಿ ಮೀನು ಖರೀದಿ ಮಾಡಲು ಬರುತ್ತಿದ್ದರು. ಜನ ಸೇರುವುದರಿಂದ ಸೋಂಕು ಹರಡುತ್ತೆ ಎಂಬ ಭೀತಿಯಲ್ಲಿ ಬಂದರಿನಲ್ಲಿ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೀನು ಖರೀದಿಸುತ್ತಿದ್ದು ಜನಜಂಗುಳಿ ಏರ್ಪಡುತ್ತಿದ್ದು , ಇದರಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದು. ಅಲ್ಲದೆ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದನ್ನೂ ಮಾಡಬಹುದು. ಮಂಗಳೂರು ಮೀನುಗಾರಿಕೆ ಬಂದರಿನ ಒಳಗೆ ಹೊರ ರಾಜ್ಯದಿಂದ ಬರುವ ಮೀನುಗಳ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರ ಮಾಡುವಂತಿಲ್ಲ. ಸಾರ್ವಜನಿಕರು ಕೂಡ ಬಂದರಿನಲ್ಲಿ ಅನವಶ್ಯಕ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Covid lockdown effect Entry of people into Bunder Port is prohibited orders Mangalore DC Dr Rajendra Kumar after a meeting held with officals.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm