ಬ್ರೇಕಿಂಗ್ ನ್ಯೂಸ್
04-05-21 05:13 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳಿಗೆ ಅಂತ್ಯಸಂಸ್ಕಾರ ನಡೆಸಲು ಸ್ವತಃ ರಕ್ತಸಂಬಂಧಿಗಳೇ ಹಿಂಜರಿಯುತ್ತಿದ್ದರೆ, ಇಲ್ಲೊಬ್ಬರು ಕಾರ್ಪೊರೇಟರ್ ಜನಸೇವೆಯೇ ಜನಾರ್ದನ ಸೇವೆ ಎನ್ನುತ್ತಾ ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ವಾರಸುದಾರರಿಲ್ಲದ, ಸಂಬಂಧಿಕರು ತ್ಯಜಿಸಿದ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ವಾರ್ಡಿನ ಕಾರ್ಪೊರೇಟರ್ ಗಣೇಶ್ ಕುಲಾಲ್, ಎರಡು ವಾರಗಳಿಂದ ತಮ್ಮ ವಿಭಿನ್ನ ಕಾರ್ಯದಿಂದ ಗಮನ ಸೆಳೆದಿದ್ದಾರೆ. ಕಳೆದ ಎರಡು ವಾರಗಳಲ್ಲಿ ವಾರಸುದಾರರಿಲ್ಲದ 12 ಮೃತದೇಹಗಳಿಗೆ ಸ್ವತಃ ಸಂಸ್ಕಾರ ನೆರವೇರಿಸಿದ್ದಾರೆ.

12 ಶವಗಳ ಪೈಕಿ 9 ಕೊರೊನಾ ಸೋಂಕಿನಿಂದ ಮೃತಪಟ್ಟದ್ದಾಗಿದ್ದು ಉಳಿದ ಮೂರು ಮಂದಿ ಇತರೇ ಕಾಯಿಲೆಯಿಂದ ಮೃತಪಟ್ಟವರು. ಇದರಲ್ಲಿ ಕೇರಳ ಹಾಗೂ ಮಡಿಕೇರಿ ಮೂಲದ ವಾರೀಸುದಾರರಿಲ್ಲದ ಶವಗಳೂ ಇದ್ದವು. ಕುಟುಂಬಸ್ಥರು ನಿರಾಕರಿಸಿದ ಎರಡು ಮೃತದೇಹಗಳಿಗೆ ಗಣೇಶ ಕುಲಾಲ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವಿಶೇಷ ಅಂದ್ರೆ ಒಂಬತ್ತು ಶವಗಳು ಮಂಗಳೂರು ತಾಲೂಕಿನದ್ದೇ ಆಗಿದ್ದು ಸಂಬಂಧಿಕರಿದ್ದರೂ ಅಂತ್ಯಕ್ರಿಯೆ ಸಾಧ್ಯವಾಗದೆ ಗಣೇಶ ಕುಲಾಲರೇ ಸ್ವತಃ ಖರ್ಚಿನಲ್ಲಿ ಸಂಸ್ಕಾರ ನೆರವೇರಿಸಿದ್ದಾರೆ. ಐವರು ಮಹಿಳೆಯರಾಗಿದ್ದು, ಏಳು ಮಂದಿ ಪುರುಷರು. ಎಲ್ಲ ಶವಗಳನ್ನೂ ನಂದಿಗುಡ್ಡೆ ಹಾಗೂ ಬೋಳೂರು ಚಿತಾಗಾರದಲ್ಲಿ ವಿಧಿವತ್ತಾಗಿ ಭಸ್ಮ ಮಾಡಿದ್ದಾರೆ.

ಗಣೇಶ ಕುಲಾಲ್ ಸಾಮಾಜಿಕವಾಗಿಯೂ ಕೆಲಸ ಮಾಡುತ್ತಿದ್ದಾರೆ. ಅಗತ್ಯ ಇದ್ದವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಜೊತೆಗೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಉಚಿತ ವ್ಯವಸ್ಥೆಯನ್ನೂ ನೆರವೇರಿಸಿದ್ದಾರೆ. ಕೊರೊನಾ ಸೋಂಕು ಸಮಾಜದಲ್ಲಿ ಭೀತಿ ಮೂಡಿಸಿರುವಾಗ, ಆಸ್ಪತ್ರೆಯಲ್ಲಿ ಶವಗಳನ್ನು ಬಿಟ್ಟು ಸ್ವಂತ ಸಂಬಂಧಿಗಳೇ ದೂರ ಹೋಗುತ್ತಿರುವಾಗ ಒಬ್ಬ ಜನಪ್ರತಿನಿಧಿಯಾಗಿ ಗಣೇಶ್ ಕುಲಾಲ್ ಉತ್ತಮ ಕಾರ್ಯ ಮಾಡುತ್ತಿದ್ದು ತಮ್ಮ ಕೆಲಸದಿಂದಲೇ ಗಮನ ಸೆಳೆದಿದ್ದಾರೆ.
Mangalore MCC Derebail Corporater Ganesh Kulal is giving dignified burial to unclaimed Covid-19 victims in the city. The Corporater has gained huge appreciation for his humanitarian work.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm