ಬ್ರೇಕಿಂಗ್ ನ್ಯೂಸ್
04-05-21 05:13 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳಿಗೆ ಅಂತ್ಯಸಂಸ್ಕಾರ ನಡೆಸಲು ಸ್ವತಃ ರಕ್ತಸಂಬಂಧಿಗಳೇ ಹಿಂಜರಿಯುತ್ತಿದ್ದರೆ, ಇಲ್ಲೊಬ್ಬರು ಕಾರ್ಪೊರೇಟರ್ ಜನಸೇವೆಯೇ ಜನಾರ್ದನ ಸೇವೆ ಎನ್ನುತ್ತಾ ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ವಾರಸುದಾರರಿಲ್ಲದ, ಸಂಬಂಧಿಕರು ತ್ಯಜಿಸಿದ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ವಾರ್ಡಿನ ಕಾರ್ಪೊರೇಟರ್ ಗಣೇಶ್ ಕುಲಾಲ್, ಎರಡು ವಾರಗಳಿಂದ ತಮ್ಮ ವಿಭಿನ್ನ ಕಾರ್ಯದಿಂದ ಗಮನ ಸೆಳೆದಿದ್ದಾರೆ. ಕಳೆದ ಎರಡು ವಾರಗಳಲ್ಲಿ ವಾರಸುದಾರರಿಲ್ಲದ 12 ಮೃತದೇಹಗಳಿಗೆ ಸ್ವತಃ ಸಂಸ್ಕಾರ ನೆರವೇರಿಸಿದ್ದಾರೆ.

12 ಶವಗಳ ಪೈಕಿ 9 ಕೊರೊನಾ ಸೋಂಕಿನಿಂದ ಮೃತಪಟ್ಟದ್ದಾಗಿದ್ದು ಉಳಿದ ಮೂರು ಮಂದಿ ಇತರೇ ಕಾಯಿಲೆಯಿಂದ ಮೃತಪಟ್ಟವರು. ಇದರಲ್ಲಿ ಕೇರಳ ಹಾಗೂ ಮಡಿಕೇರಿ ಮೂಲದ ವಾರೀಸುದಾರರಿಲ್ಲದ ಶವಗಳೂ ಇದ್ದವು. ಕುಟುಂಬಸ್ಥರು ನಿರಾಕರಿಸಿದ ಎರಡು ಮೃತದೇಹಗಳಿಗೆ ಗಣೇಶ ಕುಲಾಲ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವಿಶೇಷ ಅಂದ್ರೆ ಒಂಬತ್ತು ಶವಗಳು ಮಂಗಳೂರು ತಾಲೂಕಿನದ್ದೇ ಆಗಿದ್ದು ಸಂಬಂಧಿಕರಿದ್ದರೂ ಅಂತ್ಯಕ್ರಿಯೆ ಸಾಧ್ಯವಾಗದೆ ಗಣೇಶ ಕುಲಾಲರೇ ಸ್ವತಃ ಖರ್ಚಿನಲ್ಲಿ ಸಂಸ್ಕಾರ ನೆರವೇರಿಸಿದ್ದಾರೆ. ಐವರು ಮಹಿಳೆಯರಾಗಿದ್ದು, ಏಳು ಮಂದಿ ಪುರುಷರು. ಎಲ್ಲ ಶವಗಳನ್ನೂ ನಂದಿಗುಡ್ಡೆ ಹಾಗೂ ಬೋಳೂರು ಚಿತಾಗಾರದಲ್ಲಿ ವಿಧಿವತ್ತಾಗಿ ಭಸ್ಮ ಮಾಡಿದ್ದಾರೆ.

ಗಣೇಶ ಕುಲಾಲ್ ಸಾಮಾಜಿಕವಾಗಿಯೂ ಕೆಲಸ ಮಾಡುತ್ತಿದ್ದಾರೆ. ಅಗತ್ಯ ಇದ್ದವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಜೊತೆಗೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಉಚಿತ ವ್ಯವಸ್ಥೆಯನ್ನೂ ನೆರವೇರಿಸಿದ್ದಾರೆ. ಕೊರೊನಾ ಸೋಂಕು ಸಮಾಜದಲ್ಲಿ ಭೀತಿ ಮೂಡಿಸಿರುವಾಗ, ಆಸ್ಪತ್ರೆಯಲ್ಲಿ ಶವಗಳನ್ನು ಬಿಟ್ಟು ಸ್ವಂತ ಸಂಬಂಧಿಗಳೇ ದೂರ ಹೋಗುತ್ತಿರುವಾಗ ಒಬ್ಬ ಜನಪ್ರತಿನಿಧಿಯಾಗಿ ಗಣೇಶ್ ಕುಲಾಲ್ ಉತ್ತಮ ಕಾರ್ಯ ಮಾಡುತ್ತಿದ್ದು ತಮ್ಮ ಕೆಲಸದಿಂದಲೇ ಗಮನ ಸೆಳೆದಿದ್ದಾರೆ.
Mangalore MCC Derebail Corporater Ganesh Kulal is giving dignified burial to unclaimed Covid-19 victims in the city. The Corporater has gained huge appreciation for his humanitarian work.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm