ಬ್ರೇಕಿಂಗ್ ನ್ಯೂಸ್
04-05-21 05:13 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳಿಗೆ ಅಂತ್ಯಸಂಸ್ಕಾರ ನಡೆಸಲು ಸ್ವತಃ ರಕ್ತಸಂಬಂಧಿಗಳೇ ಹಿಂಜರಿಯುತ್ತಿದ್ದರೆ, ಇಲ್ಲೊಬ್ಬರು ಕಾರ್ಪೊರೇಟರ್ ಜನಸೇವೆಯೇ ಜನಾರ್ದನ ಸೇವೆ ಎನ್ನುತ್ತಾ ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ವಾರಸುದಾರರಿಲ್ಲದ, ಸಂಬಂಧಿಕರು ತ್ಯಜಿಸಿದ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ವಾರ್ಡಿನ ಕಾರ್ಪೊರೇಟರ್ ಗಣೇಶ್ ಕುಲಾಲ್, ಎರಡು ವಾರಗಳಿಂದ ತಮ್ಮ ವಿಭಿನ್ನ ಕಾರ್ಯದಿಂದ ಗಮನ ಸೆಳೆದಿದ್ದಾರೆ. ಕಳೆದ ಎರಡು ವಾರಗಳಲ್ಲಿ ವಾರಸುದಾರರಿಲ್ಲದ 12 ಮೃತದೇಹಗಳಿಗೆ ಸ್ವತಃ ಸಂಸ್ಕಾರ ನೆರವೇರಿಸಿದ್ದಾರೆ.

12 ಶವಗಳ ಪೈಕಿ 9 ಕೊರೊನಾ ಸೋಂಕಿನಿಂದ ಮೃತಪಟ್ಟದ್ದಾಗಿದ್ದು ಉಳಿದ ಮೂರು ಮಂದಿ ಇತರೇ ಕಾಯಿಲೆಯಿಂದ ಮೃತಪಟ್ಟವರು. ಇದರಲ್ಲಿ ಕೇರಳ ಹಾಗೂ ಮಡಿಕೇರಿ ಮೂಲದ ವಾರೀಸುದಾರರಿಲ್ಲದ ಶವಗಳೂ ಇದ್ದವು. ಕುಟುಂಬಸ್ಥರು ನಿರಾಕರಿಸಿದ ಎರಡು ಮೃತದೇಹಗಳಿಗೆ ಗಣೇಶ ಕುಲಾಲ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವಿಶೇಷ ಅಂದ್ರೆ ಒಂಬತ್ತು ಶವಗಳು ಮಂಗಳೂರು ತಾಲೂಕಿನದ್ದೇ ಆಗಿದ್ದು ಸಂಬಂಧಿಕರಿದ್ದರೂ ಅಂತ್ಯಕ್ರಿಯೆ ಸಾಧ್ಯವಾಗದೆ ಗಣೇಶ ಕುಲಾಲರೇ ಸ್ವತಃ ಖರ್ಚಿನಲ್ಲಿ ಸಂಸ್ಕಾರ ನೆರವೇರಿಸಿದ್ದಾರೆ. ಐವರು ಮಹಿಳೆಯರಾಗಿದ್ದು, ಏಳು ಮಂದಿ ಪುರುಷರು. ಎಲ್ಲ ಶವಗಳನ್ನೂ ನಂದಿಗುಡ್ಡೆ ಹಾಗೂ ಬೋಳೂರು ಚಿತಾಗಾರದಲ್ಲಿ ವಿಧಿವತ್ತಾಗಿ ಭಸ್ಮ ಮಾಡಿದ್ದಾರೆ.

ಗಣೇಶ ಕುಲಾಲ್ ಸಾಮಾಜಿಕವಾಗಿಯೂ ಕೆಲಸ ಮಾಡುತ್ತಿದ್ದಾರೆ. ಅಗತ್ಯ ಇದ್ದವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಜೊತೆಗೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಉಚಿತ ವ್ಯವಸ್ಥೆಯನ್ನೂ ನೆರವೇರಿಸಿದ್ದಾರೆ. ಕೊರೊನಾ ಸೋಂಕು ಸಮಾಜದಲ್ಲಿ ಭೀತಿ ಮೂಡಿಸಿರುವಾಗ, ಆಸ್ಪತ್ರೆಯಲ್ಲಿ ಶವಗಳನ್ನು ಬಿಟ್ಟು ಸ್ವಂತ ಸಂಬಂಧಿಗಳೇ ದೂರ ಹೋಗುತ್ತಿರುವಾಗ ಒಬ್ಬ ಜನಪ್ರತಿನಿಧಿಯಾಗಿ ಗಣೇಶ್ ಕುಲಾಲ್ ಉತ್ತಮ ಕಾರ್ಯ ಮಾಡುತ್ತಿದ್ದು ತಮ್ಮ ಕೆಲಸದಿಂದಲೇ ಗಮನ ಸೆಳೆದಿದ್ದಾರೆ.
Mangalore MCC Derebail Corporater Ganesh Kulal is giving dignified burial to unclaimed Covid-19 victims in the city. The Corporater has gained huge appreciation for his humanitarian work.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm