ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.

ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.

ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.

ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm