ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.

ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.

ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.

ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm