ಬ್ರೇಕಿಂಗ್ ನ್ಯೂಸ್
05-05-21 03:22 pm Mangalore Correspondent ಕರಾವಳಿ
ಉಳ್ಳಾಲ, ಮೇ 5 : ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿದ್ದು ಕೋವಿಡ್ ಬಾಧಿತರಿಗಾಗಿ ತುರ್ತು ಸಹಾಯವಾಣಿ ರಚಿಸಲಾಗಿದೆ. ಉಳ್ಳಾಲ ನಗರಸಭೆ ಕೋವಿಡ್ ಸಹಾಯವಾಣಿ 8024487311 ಆಗಿರುತ್ತದೆ ಎಂದು ಉಳ್ಳಾಲ ನಗರಸಭೆ ಪೌರಾಯುಕ್ತ ರಾಯಪ್ಪ ತಿಳಿಸಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಮೇ 4 ರ ವರೆಗೆ 202 ಕೋವಿಡ್ ಪಾಸಿಟಿವ್ ಕೇಸ್ ಕಂಡುಬಂದಿದೆ. ಅದರಲ್ಲಿ 164 ಮಂದಿ ಹೋಮ್ ಐಸೊಲೇಷನಲ್ಲಿ ಇದ್ದು ನಗರಸಭೆ ಅಧಿಕಾರಿಗಳು ನಿತ್ಯವೂ ಅವರಿಗೆ ಫೋನ್ ಮಾಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. 38 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಕೂಡಲೇ ಆಸ್ಪತ್ರೆಗೆ ದಾಖಲಾಗುವ ಅಗತ್ಯ ಇಲ್ಲ. ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯಬಹುದು.

ನಗರಸಭೆಯ ಅಧಿಕಾರಿಗಳು ಹೋಮ್ ಐಸೊಲೇಷನ್ ನಲ್ಲಿ ಇರುವವರನ್ನು ದಿನನಿತ್ಯವೂ ಸಂಪರ್ಕಿಸಿ ರೋಗ ಉಲ್ಬಣವಾದಲ್ಲಿ ಅವರನ್ನು ಆಸ್ಪತ್ರೆ ಸೇರಿಸುವ ಕಾರ್ಯ ನಡೆಸುತ್ತಾರೆ. ಜನರು ಸಾಮಾಜಿಕ ಅಂತರ, ಮಾಸ್ಕ್ ಹಾಕದೆ ಬೇಜವಾಬ್ದಾರಿಯಿಂದ ವರ್ತಿಸುವುದು ಸರಿಯಲ್ಲ. ಸರಕಾರದ ಆದೇಶಗಳನ್ನು ಗಾಳಿಗೆ ತೂರುವವರ ವಿರುದ್ಧ ದಂಡ ಪ್ರಯೋಗಿಸಿದ್ದೇವೆ. ಕೋವಿಡ್ ಎರಡನೇ ಅಲೆಯು ತೀವ್ರವಾಗಿ ಹರಡುತ್ತಿದ್ದು ಸಾರ್ವಜನಿಕರು ಸರಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಮನೆಯಲ್ಲೇ ಇದ್ದು ಅಗತ್ಯವಿದ್ದರೆ ಮಾತ್ರ ಹೊರಗಡೆ ಬರುವಂತೆ ಪೌರಾಯುಕ್ತ ರಾಯಪ್ಪ ಅವರು ಎಚ್ಚರಿಕೆ ನೀಡಿದರು.
ನಗರ ಉಪಾಧ್ಯಕ್ಷ ಆಯುಬ್ ಮಂಚಿಲ ಮಾತನಾಡಿ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲೂ ಕೋವಿಡ್ ನಿಯಮ ಪಾಲಿಸುವಂತೆ ನಗರಸಭೆಯ ವತಿಯಿಂದ ಲಿಖಿತವಾಗಿ ವಿನಂತಿಸಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ತೀವ್ರತೆಯನ್ನು ಗಮನಿಸಿ ನಗರಸಭೆ ವತಿಯಿಂದ ದಿನಸಿ ಕಿಟ್ ಗಳನ್ನು ವಿತರಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಮುಂಬರುವ ದಿನಗಳಲ್ಲಿ ಕೋವಿಡ್ ಬಾಧಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ನಗರಸಭೆಯಿಂದ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಲಾಗುವುದೆಂದು ಹೇಳಿದರು. ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಝರಿನಾ ಬಾನು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
For the help of Covid - 19 patients, the Ullal town municipal corporation had released a helpline no during distress 8024487311.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm