ಬ್ರೇಕಿಂಗ್ ನ್ಯೂಸ್
05-05-21 10:34 pm Mangaluru Correspondent ಕರಾವಳಿ
ಮಂಗಳೂರು, ಮೇ 5: ಕೋವಿಡ್ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.
ಬಳಿಕ ಮಾತನಾಡಿದ ಶಾಸಕ ಕಾಮತ್, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಯ ವರದಿ ತಡವಾಗುತ್ತಿರುವ ಕುರಿತು ಮಾಹಿತಿ ಪಡೆದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕೋವಿಡ್ ಪರೀಕ್ಷೆಗೆ ಒಳಪಡುತ್ತಿದ್ದಾರೆ. ಹಾಗಾಗಿ ಪರೀಕ್ಷಾ ವರದಿ ತಡವಾಗುತ್ತಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಈಗಾಗಲೇ ಸರಕಾರ ನೀಡಿರುವ ಎರಡು ಟೆಸ್ಟಿಂಗ್ ಮೆಶಿನ್ ಗಳನ್ನು ಅಳವಡಿಸಲಾಗಿದೆ. ಅದನ್ನು ವ್ಯವಸ್ಥಿತವಾಗಿ ಬಳಸಿಕೊಂಡು ಒಂದೇ ದಿನದಲ್ಲಿ ಪರೀಕ್ಷಾ ವರದಿಯನ್ನು ನೀಡುವಂತೆ ಸೂಚಿಸಿದ್ದೇನೆ. ಹಾಗೂ ಆಸ್ಪತ್ರೆಯಲ್ಲಿ ದಾಖಲಾಗುವ ಕೋವಿಡ್ ಸೋಂಕಿತರ ಆರೋಗ್ಯದ ಕುರಿತು ಅವರ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲು ಆಸ್ಪತ್ರೆಯಲ್ಲಿ ಸಹಾಯ ಕೇಂದ್ರ ತೆರೆದು ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆಯಾಗದಂತೆ ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ರೋಗಿಗಳಿಗೆ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಕಾಮತ್ ಸೂಚಿಸಿದ್ದಾರೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವ ವಿಲೇವಾರಿ ಯಾವುದೇ ಕಾರಣಕ್ಕೂ ತಡವಾಗಬಾರದು. ಮೃತಪಟ್ಟ ಕೆಲವೇ ಕ್ಷಣಗಳಲ್ಲಿ ಮೃತ ರೋಗಿಯ ಶವ ವಿಲೇವಾರಿ ಮಾಡಬೇಕು. ಶವ ಸಂಸ್ಕಾರಕ್ಕೆ ಸಂಬಂಧಪಟ್ಟವರು ಮುಂದಾಗದಿದ್ದರೆ ಶವ ಸಂಸ್ಕಾರಕ್ಕೆ ಸ್ವಯಂಸೇವಕರ ತಂಡವನ್ನು ರಚಿಸಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಸ್ವಯಂಸೇವಕರಿಗೆ ಬೇಕಾದ ಪೂರ್ಣ ಪ್ರಮಾಣದ ಪಿಪಿಇ ಕಿಟ್ ಒದಗಿಸುವಂತೆ ಅಧಿಕಾರಿಗಳಿಗೆ ಶಾಸಕ ಕಾಮತ್ ಸೂಚಿಸಿದರು.

ಕೋವಿಡ್ ಪರೀಕ್ಷಾ ವರದಿ ತಡವಾಗುವ ವೇಳೆ ಪರೀಕ್ಷೆಗೆ ಒಳಪಡುವ ವ್ಯಕ್ತಿ ಸಾರ್ವಜನಿಕವಾಗಿ ತಿರುಗಾಡದಂತೆ ಕ್ರಮ ಕೈಗೊಳ್ಳಬೇಕು. ಪರೀಕ್ಷಾ ವರದಿ ಬರುವ ವರೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಬೇಕು ಎಂದರು. ಆಕ್ಸಿಜನ್ ಹಾಗೂ ವೆಂಟಿಲೇಟರ್ ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸುವ ಕುರಿತು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರಿಗೆ ಶಾಸಕ ಕಾಮತ್ ಸೂಚಿಸಿದರು.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಮಾಜಿ ಕಾರ್ಪೊರೇಟರ್ ಹಾಗೂ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರಾದ ಸದಾಶಿವ ಶಾನುಭೋಗ್, ಸ್ಥಾನೀಯ ವೈದ್ಯಾಧಿಕಾರಿ, ತಾಲೂಕು ವೈದ್ಯಾಧಿಕಾರಿ ಸುಜಯ್ ಭಂಡಾರಿ, ಜಿಲ್ಲಾ ಔಷಧ ನಿಯಂತ್ರಣಾಧಿಕಾರಿ ರಮಾಕಾಂತ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Delay in Covid-19 test results, MLA Vedavyas Kamath holds meeting with Wenlock Hospital officials in Mangalore.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm