ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.
ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm