ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm