ಬ್ರೇಕಿಂಗ್ ನ್ಯೂಸ್
07-05-21 01:04 pm Mangalore Correspondent ಕರಾವಳಿ
ಮಂಗಳೂರು, ಮೇ 7: ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಹೊಡೆದ ಘಟನೆ ನಗರದ ಪದವಿನಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದ್ದು ಇಡೀ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಬೋಂದೆಲ್ ಕಡೆಯಿಂದ ಕೆಟಿಎಂ ಬೈಕಿನಲ್ಲಿ ವೇಗವಾಗಿ ಬರುತ್ತಿದ್ದ ಸವಾರ ಪ್ರಶಾಂತ್ ಎಂಬ ಯುವಕ ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಎರಡು ಪಲ್ಟಿ ಹೊಡೆದಿದ್ದಾನೆ. ಸ್ಕೂಟರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಿ, ಮತ್ತೊಂದು ಬೈಕಿನ ನಡುವೆ ನುಗ್ಗಿ ಬಂದ ಕೆಟಿಎಂ ಬೈಕ್ ಅಂಗಡಿಯೊಂದರ ಮುಂದೆ ಇರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಟಲಿಗಳ ಬಾಕ್ಸ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಬೈಕ್ ಪಲ್ಟಿಯಾಗಿ ಅಲ್ಲಿಯೇ ರಸ್ತೆಗೆ ಬಿದ್ದರೆ, ಸವಾರ ನೇರವಾಗಿ ಗಾಳಿಯಲ್ಲಿ ಮೇಲ್ಮುಖವಾಗಿ ಉಲ್ಟಾ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾನೆ. ಬೈಕ್ ರಸ್ತೆಗೆ ಅಡ್ಡ ಬಿದ್ದ ಪರಿಣಾಮ ಹಿಂಭಾಗದಿಂದ ಬರುತ್ತಿದ್ದ ಮತ್ತೊಂದು ಬೈಕಿನ ಮೇಲೆ ತಾಗಿ ಅದು ಕೂಡ ಉರುಳಿ ಬಿದ್ದಿದೆ. ಅದರಲ್ಲಿದ್ದ ಸವಾರ ಸ್ವಲ್ಪ ಗಾಯಗೊಂಡು ಅಲ್ಲಿಂದ ಎದ್ದು ಹೋಗುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.


ಬೈಕ್ ಸವಾರ ಪ್ರಶಾಂತ್ ನೀರುಮಾರ್ಗದಲ್ಲಿ ಇರುವ ಚೇತನಾ ಎಂಟರ್ ಪ್ರೈಸಸ್ ಎಂಬ ಅಂಗಡಿಯಲ್ಲಿ ಕೆಲಸಕ್ಕಿದ್ದಾನೆ ಎನ್ನಲಾಗುತ್ತಿದ್ದು ಗಂಭೀರ ಗಾಯಗೊಂಡ ಆತನನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ.
Read: ಬೈಕ್ ಪಲ್ಟಿ ; ಗಂಭೀರ ಸ್ಥಿತಿಯಲ್ಲಿದ್ದ ಯುವಕ ಮೃತ್ಯು
Video:
Horrific accident at Padavinangady youth thrown in the air after a bike accident in Mangalore. The KTM bike rider met with an accident after he went to save the Active rider who stood at the middle of the road.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm