ಬ್ರೇಕಿಂಗ್ ನ್ಯೂಸ್
08-05-21 07:56 pm Mangaluru Correspondent ಕರಾವಳಿ
ಮಂಗಳೂರು, ಮೇ 8: ಪದವಿನಂಗಡಿಯಲ್ಲಿ ರಸ್ತೆಯನ್ನು ಅತಿಕ್ರಮಿಸಿಕೊಂಡಿರುವ ಕಟ್ಟಡಕ್ಕೆ ಬಡಿದು ಬೈಕ್ ಅಪಘಾತ ನಡೆದಿರುವ ಸ್ಥಳಕ್ಕೆ ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ರಸ್ತೆಯಲ್ಲೇ ಅಂಗಡಿ ಮಾಡಿಕೊಂಡಿರುವ ಜಾಗವನ್ನು ಪರಿಶೀಲನೆ ನಡೆಸಿದ್ದು, ಕಟ್ಟಡದ ಸ್ಟೆಪ್ ಇರುವುದನ್ನು ತೆರವುಗೊಳಿಸಿ ಫುಟ್ ಪಾತ್ ನಿರ್ಮಿಸುವುದಾಗಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ನಿನ್ನೆ ಬೆಳಗ್ಗೆ ಶರಬತ್ ಕಟ್ಟೆ ನಿವಾಸಿ ಪ್ರಶಾಂತ್ ಎಂಬ ಯುವಕ ಬೈಕಿನಲ್ಲಿ ಬರುತ್ತಿದ್ದಾಗ ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿ, ರಸ್ತೆಯ ಬದಿಗೆ ಸರಿದಿದ್ದು ಈ ವೇಳೆ ಕಟ್ಟಡದ ಮುಂದೆ ಇರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಕ್ಸ್ ಗೆ ಬಡಿದು ಬೈಕ್ ಪಲ್ಟಿಯಾಗಿತ್ತು. ತಲೆಗೆ ತೀವ್ರ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದ. ಈ ಘಟನೆಗೆ ಸ್ಕೂಟರ್ ಅಡ್ಡ ಬಂದಿದ್ದು ಮಾತ್ರವಲ್ಲದೆ, ರಸ್ತೆ ಬದಿಯನ್ನು ಅತಿಕ್ರಮಿಸಿಕೊಂಡು ಕಟ್ಟಿರುವ ಕಟ್ಟಡವೂ ಕಾರಣ. ಮಹಾನಗರ ಪಾಲಿಕೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂಥ ದುರ್ಘಟನೆ ಆಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಜನರು ಪಾಲಿಕೆಯನ್ನು ಉಗಿದು ಬರೆದಿದ್ದರು.



#WakeupMCC ಎನ್ನುವ ಹೆಸರಲ್ಲಿ ಬೈಕ್ ಅಪಘಾತದ ಸಿಸಿಟಿವಿ ವಿಡಿಯೋವನ್ನು ಮುಂದಿಟ್ಟು ಮಹಾನಗರ ಪಾಲಿಕೆಯ ಭ್ರಷ್ಟ ಅಧಿಕಾರಿಗಳನ್ನು ಜಾಡಿಸುವ ಕೆಲಸ ಮಾಡಿದ್ದರು. ಇದರ ಫಲವೆಂಬಂತೆ, ಇಂದು ಬೆಳಗ್ಗೆ ನಗರ ಯೋಜನಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಕಟ್ಟಡದ ಪಾರ್ಶ್ವವನ್ನು ತೆರವು ಮಾಡುವ ಭರವಸೆ ನೀಡಿದ್ದಾರೆ.
ಪದವಿನಂಗಡಿ ಬಳಿಯ ಪೇರ್ಲಗುರಿ ಕ್ರಾಸ್ ನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಅಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಕಾರಣ ಎನ್ನುವುದನ್ನು ಸ್ಥಳೀಯರು ಹೇಳುತ್ತಾ ಬಂದಿದ್ದರು. ತಿರುವಿನಲ್ಲಿ ಸಂಚರಿಸುವ ವಾಹನಗಳಿಗೆ ಮುಂದಿರುವ ವಾಹನಗಳು ಕಾಣಿಸದೆ ಅಪಘಾತ ಸಂಭವಿಸುತ್ತಿದೆ. ಅಲ್ಲಿ ಡಿವೈಡರ್ ಕೊಟ್ಟಿರುವುದು ಮತ್ತು ಅಲ್ಲಿಂದ ಆಚೀಚೆ ಸಂಚರಿಸಲು ಅವಕಾಶ ಕೊಟ್ಟಿರುವ ಕಾರಣದಿಂದ ಅಪಘಾತ ಆಗುತ್ತಿರುವುದಾಗಿ ಹೇಳಿಕೊಂಡಿದ್ದರು.
ಇತ್ತೀಚೆಗೆ ಅದೇ ಜಾಗದಲ್ಲಿ ಕಾರು ಅಪಘಾತವಾಗಿ ರಸ್ತೆ ಬದಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿತ್ತು. ಕಾರು ಪಲ್ಟಿಯಾಗಿ ಸ್ವಲ್ಪದರಲ್ಲಿ ಕಾರು ಚಾಲಕ ಬಚಾವಾಗಿದ್ದ. ಆದರೆ, ಈ ರೀತಿಯ ಘಟನೆಗಳು ಮರುಕಳಿಸುತ್ತಿದ್ದರೂ, ಅಧಿಕಾರಿಗಳು ಎಚ್ಚತ್ತುಕೊಂಡಿರಲಿಲ್ಲ.
The officials of town planning department of Mangaluru City Corporation (MCC) visited the spot at Padavinangady where a bike rider Prashanth lost his life while trying to avoid colliding against a scooter. The CCTV footage video of the accident which took place on Friday May 8 had gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm