ಬ್ರೇಕಿಂಗ್ ನ್ಯೂಸ್
08-05-21 07:56 pm Mangaluru Correspondent ಕರಾವಳಿ
ಮಂಗಳೂರು, ಮೇ 8: ಪದವಿನಂಗಡಿಯಲ್ಲಿ ರಸ್ತೆಯನ್ನು ಅತಿಕ್ರಮಿಸಿಕೊಂಡಿರುವ ಕಟ್ಟಡಕ್ಕೆ ಬಡಿದು ಬೈಕ್ ಅಪಘಾತ ನಡೆದಿರುವ ಸ್ಥಳಕ್ಕೆ ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಅಧಿಕಾರಿಗಳು ಭೇಟಿ ನೀಡಿದ್ದಾರೆ. ರಸ್ತೆಯಲ್ಲೇ ಅಂಗಡಿ ಮಾಡಿಕೊಂಡಿರುವ ಜಾಗವನ್ನು ಪರಿಶೀಲನೆ ನಡೆಸಿದ್ದು, ಕಟ್ಟಡದ ಸ್ಟೆಪ್ ಇರುವುದನ್ನು ತೆರವುಗೊಳಿಸಿ ಫುಟ್ ಪಾತ್ ನಿರ್ಮಿಸುವುದಾಗಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.
ನಿನ್ನೆ ಬೆಳಗ್ಗೆ ಶರಬತ್ ಕಟ್ಟೆ ನಿವಾಸಿ ಪ್ರಶಾಂತ್ ಎಂಬ ಯುವಕ ಬೈಕಿನಲ್ಲಿ ಬರುತ್ತಿದ್ದಾಗ ಅಡ್ಡಲಾಗಿ ಬಂದ ಸ್ಕೂಟರನ್ನು ತಪ್ಪಿಸಲು ಯತ್ನಿಸಿ, ರಸ್ತೆಯ ಬದಿಗೆ ಸರಿದಿದ್ದು ಈ ವೇಳೆ ಕಟ್ಟಡದ ಮುಂದೆ ಇರಿಸಿದ್ದ ಕೋಲ್ಡ್ ಡ್ರಿಂಕ್ಸ್ ಬಾಕ್ಸ್ ಗೆ ಬಡಿದು ಬೈಕ್ ಪಲ್ಟಿಯಾಗಿತ್ತು. ತಲೆಗೆ ತೀವ್ರ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದ. ಈ ಘಟನೆಗೆ ಸ್ಕೂಟರ್ ಅಡ್ಡ ಬಂದಿದ್ದು ಮಾತ್ರವಲ್ಲದೆ, ರಸ್ತೆ ಬದಿಯನ್ನು ಅತಿಕ್ರಮಿಸಿಕೊಂಡು ಕಟ್ಟಿರುವ ಕಟ್ಟಡವೂ ಕಾರಣ. ಮಹಾನಗರ ಪಾಲಿಕೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂಥ ದುರ್ಘಟನೆ ಆಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಜನರು ಪಾಲಿಕೆಯನ್ನು ಉಗಿದು ಬರೆದಿದ್ದರು.



#WakeupMCC ಎನ್ನುವ ಹೆಸರಲ್ಲಿ ಬೈಕ್ ಅಪಘಾತದ ಸಿಸಿಟಿವಿ ವಿಡಿಯೋವನ್ನು ಮುಂದಿಟ್ಟು ಮಹಾನಗರ ಪಾಲಿಕೆಯ ಭ್ರಷ್ಟ ಅಧಿಕಾರಿಗಳನ್ನು ಜಾಡಿಸುವ ಕೆಲಸ ಮಾಡಿದ್ದರು. ಇದರ ಫಲವೆಂಬಂತೆ, ಇಂದು ಬೆಳಗ್ಗೆ ನಗರ ಯೋಜನಾ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಕಟ್ಟಡದ ಪಾರ್ಶ್ವವನ್ನು ತೆರವು ಮಾಡುವ ಭರವಸೆ ನೀಡಿದ್ದಾರೆ.
ಪದವಿನಂಗಡಿ ಬಳಿಯ ಪೇರ್ಲಗುರಿ ಕ್ರಾಸ್ ನಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಅಲ್ಲಿ ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಕಾರಣ ಎನ್ನುವುದನ್ನು ಸ್ಥಳೀಯರು ಹೇಳುತ್ತಾ ಬಂದಿದ್ದರು. ತಿರುವಿನಲ್ಲಿ ಸಂಚರಿಸುವ ವಾಹನಗಳಿಗೆ ಮುಂದಿರುವ ವಾಹನಗಳು ಕಾಣಿಸದೆ ಅಪಘಾತ ಸಂಭವಿಸುತ್ತಿದೆ. ಅಲ್ಲಿ ಡಿವೈಡರ್ ಕೊಟ್ಟಿರುವುದು ಮತ್ತು ಅಲ್ಲಿಂದ ಆಚೀಚೆ ಸಂಚರಿಸಲು ಅವಕಾಶ ಕೊಟ್ಟಿರುವ ಕಾರಣದಿಂದ ಅಪಘಾತ ಆಗುತ್ತಿರುವುದಾಗಿ ಹೇಳಿಕೊಂಡಿದ್ದರು.
ಇತ್ತೀಚೆಗೆ ಅದೇ ಜಾಗದಲ್ಲಿ ಕಾರು ಅಪಘಾತವಾಗಿ ರಸ್ತೆ ಬದಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿಯಾಗಿತ್ತು. ಕಾರು ಪಲ್ಟಿಯಾಗಿ ಸ್ವಲ್ಪದರಲ್ಲಿ ಕಾರು ಚಾಲಕ ಬಚಾವಾಗಿದ್ದ. ಆದರೆ, ಈ ರೀತಿಯ ಘಟನೆಗಳು ಮರುಕಳಿಸುತ್ತಿದ್ದರೂ, ಅಧಿಕಾರಿಗಳು ಎಚ್ಚತ್ತುಕೊಂಡಿರಲಿಲ್ಲ.
The officials of town planning department of Mangaluru City Corporation (MCC) visited the spot at Padavinangady where a bike rider Prashanth lost his life while trying to avoid colliding against a scooter. The CCTV footage video of the accident which took place on Friday May 8 had gone viral on social media.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm